ಬ್ರೇಕಿಂಗ್ ನ್ಯೂಸ್
29-10-25 10:09 pm Bangalore Correspondent ಕ್ರೈಂ
ಬೆಂಗಳೂರು, ಅ 29 : ವರ್ತೂರು ಮತ್ತು ಬೆಳ್ಳಂದೂರಿನ ಕ್ರೋಮಾ ಶೋ ರೂಮ್ಗೆ ನುಗ್ಗಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸಿಕ್ಕಿಂನ ದಿವಾಸ್ ಕಮಿ (22) ಮತ್ತು ಆತನ ಪ್ರೇಯಸಿ, ನೇಪಾಳದ ಅಸ್ಮಿತಾ(26), ದಿವಾಸ್ ಕಮಿ ಸ್ನೇಹಿತ ಅರೋಹಣ್ ತಾಪಾ (24) ಬಂಧಿತರು.
ಆರೋಪಿಗಳಿಂದ ₹40 ಲಕ್ಷ ಮೌಲ್ಯದ 39 ಮೊಬೈಲ್ಗಳು, ಡಿಜಿಟಲ್ ವಾಚ್ಗಳು, ಚಿನ್ನಾಭರಣ, ಕ್ಯಾಮೆರಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಸ್ವಿಗ್ಗಿ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದರು. ನೇಪಾಳದ ಅಸ್ಮಿತಾ ಅವರಿಗೆ ಮದುವೆಯಾಗಿದ್ದು, ಪತಿಯಿಂದ ದೂರವಾಗಿ ಒಂದು ವರ್ಷದಿಂದ ದಿವಾಸ್ ಕಮಿ ಜತೆಗೆ ಸಹ ಜೀವನ ನಡೆಸುತ್ತಿದ್ದರು. ಅಸ್ಮಿತಾ ಅವರು ಮನೆಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಫುಡ್ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದ ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಕ್ರೋಮಾ ಮೊಬೈಲ್ ಅಂಗಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು. ಬೆಳ್ಳಂದೂರು ಮತ್ತು ವರ್ತೂರಿನಲ್ಲಿರುವ ಕ್ರೋಮಾ ಶೋ ರೂಮ್ಗಳ ಬಗ್ಗೆ ಇತ್ತೀಚೆಗೆ ಮಾಹಿತಿ ಸಂಗ್ರಹಿಸಿದ್ದರು. ಅಕ್ಟೋಬರ್ ಮೊದಲ ವಾರದಲ್ಲಿ ಬೆಳ್ಳಂದೂರಿನ ಕ್ರೋಮಾ ಶೋ ರೂಮ್ ಮತ್ತು ವರ್ತೂರಿನ ಕ್ರೋಮಾ ಶೋ ರೂಮ್ನಲ್ಲಿ ಮೊಬೈಲ್ ಕಳವು ಮಾಡಿ, ತುರ್ತು ನಿರ್ಗಮನ ಬಾಗಿಲು ತೆರೆದು ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು.
ಕಳವು ಮಾಡುತ್ತಿದ್ದ ದುಬಾರಿ ಬೆಲೆಯ ಮೊಬೈಲ್ಗಳನ್ನು ಅಸ್ಮಿತಾಳಿಗೆ ನೀಡುತ್ತಿದ್ದರು ಅಸ್ಮಿತಾ ತನಗೆ ಪರಿಚಯವಿದ್ದವರಿಗೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆ ಮೊಬೈಲ್ ಮಾರಾಟ ಮಾಡಿದ್ದ ಹಣದಲ್ಲಿ ಎಂಟು ಗ್ರಾಂ ಚಿನ್ನ ಖರೀದಿಸಿದ್ದ ದಿವಾಸ್ ಕಮಿ, ಪ್ರೇಯಸಿಗೆ ನೀಡಿದ್ದರು. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ದಿವಾಸ್ ಕಮಿ ತನ್ನ ಪ್ರೇಯಸಿ ಅಸ್ಮಿತಾಗಾಗಿಯೇ ಮೊಬೈಲ್ ಕಳ್ಳತನ ಮಾಡಿದ್ದೆ ಎಂಬುದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.
In a bizarre love-driven crime, a young man stole high-end mobile phones from Croma showrooms in Varthur and Bellandur — all to please his girlfriend. The Varthur Police have arrested the accused along with his lover and an accomplice.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm