ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm