ಬ್ರೇಕಿಂಗ್ ನ್ಯೂಸ್
04-11-25 02:11 pm Mangalore Correspondent ಕ್ರೈಂ
ಮಂಗಳೂರು, ನ.4 : ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಹೂಡಿಕೆ ಮಾಡಿದ ಮಂಗಳೂರಿನ ಯುವಕನೊಬ್ಬ ಬರೋಬ್ಬರಿ 32 ಲಕ್ಷ ರೂ. ಹಣ ಕಳಕೊಂಡ ಘಟನೆ ನಡೆದಿದ್ದು, ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
35 ವರ್ಷದ ಮಂಗಳೂರಿನ ಯುವಕ ಮೊಬೈಲ್ ನಲ್ಲಿ ಫೇಸ್ಬುಕ್ ನೋಡುತ್ತಿದ್ದಾಗ ಕಾವ್ಯ ಶೆಟ್ಟಿ ಹೆಸರಲ್ಲಿ ಯುವತಿಯೊಬ್ಬಳು ಪರಿಚಯ ಆಗಿದ್ದಳು. ತಾನು ಮುಂಬೈನಲ್ಲಿ ಷೇರ್ ಟ್ರೇಡಿಂಗ್ ಕೆಲಸ ಮಾಡಿಕೊಂಡಿರುವುದಾಗಿ ತಿಳಿಸಿದ್ದು ಟ್ರೇಡಿಂಗ್ ನಲ್ಲಿ ಕೆಲಸ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಿದ್ದಾರೆ.
ಆಕೆ ಬಳಿಕ ವಾಟ್ಸಾಪ್ ನಂಬರ್ ನಿಂದ ಪಿರ್ಯಾದಿದಾರರಿಗೆ h5.capdynglobal.org ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗಲು ತಿಳಿಸಿದ್ದರು. ಸದ್ರಿ ಲಿಂಕ್ ಒತ್ತಿದಾಗ capdynglobal ಎಂಬ ಟ್ರೇಡಿಂಗ್ ಆ್ಯಪ್ ಓಪನ್ ಆಗಿತ್ತು. ತನ್ನ ಇ- ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿ ಸದ್ರಿ ಟ್ರೇಡಿಂಗ್ ಆಪ್ ನಲ್ಲಿ ಜಾಯಿನ್ ಆಗಿದ್ದರು. ಟ್ರೇಡಿಂಗ್ ನಲ್ಲಿ ಶೇರು ಪರ್ಚೇಸ್ ಮಾಡಲು ರೂ. 40,000/- ಹಣ ಪಾವತಿ ಮಾಡುವಂತೆ ತಿಳಿಸಿದ್ದು, ಅದರಂತೆ ಸೆ.13ರಂದು ಫೋನ್ ಫೇ ಮಾಡಿರುತ್ತಾರೆ. ಇದಕ್ಕೆ ಲಾಭಾಂಶವಾಗಿ ಇವರ ಖಾತೆಗೆ ರೂ. 9,504/- ಹಣ ಜಮೆ ಆಗಿರುತ್ತದೆ. ನಂತರ 2,00,000/- ರೂ. ಹಣ ಹಾಕಿದಾಗ ಇದಕ್ಕೆ ಲಾಭಾಂಶವಾಗಿ 23,760/- ರೂ ಹಣ ಜಮೆ ಆಗಿರುತ್ತದೆ.
ಇದರಿಂದ ಸದ್ರಿ ಶೇರು ಮಾರ್ಕೆಟ್ ನಲ್ಲಿ ಪಿರ್ಯಾದಿದಾರರಿಗೆ ನಂಬಿಕೆ ಉಂಟಾಗಿ ಹೆಚ್ಚಿನ ಲಾಭಾಂಶ ಪಡೆಯುವ ಉದ್ದೇಶದಿಂದ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 32,06,880/-ರೂ. ಹಣವನ್ನು 13-09-2025 ರಿಂದ 24-10-2025 ರ ವರೆಗೆ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಹಣ ವರ್ಗಾವಣೆ ಮಾಡಿರುತ್ತಾರೆ. ಬಳಿಕ ಹಣ ವಂಚನೆಯಾದ ಬಗ್ಗೆ ಯುವಕನಿಗೆ ತಿಳಿದಿದ್ದು ಅಪರಿಚಿತರು ನಕಲಿ ಶೇರ್ ಮಾರ್ಕೆಟಿಂಗ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಆನ್ ಲೈನ್ ಮೂಲಕ ಪಿರ್ಯಾದಿದಾರರಿಂದ ಮೋಸದಿಂದ ಹಣ ವರ್ಗಾಯಿಸಿಕೊಂಡು ಆನ್ ಲೈನ್ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
A 35-year-old man from Mangaluru lost ₹32 lakh after falling victim to an online investment scam operated through a fake stock trading platform. The incident has been registered at the city’s Cyber Crime Police Station.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am