ಬ್ರೇಕಿಂಗ್ ನ್ಯೂಸ್
04-11-25 02:11 pm Mangalore Correspondent ಕ್ರೈಂ
ಮಂಗಳೂರು, ನ.4 : ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಹೂಡಿಕೆ ಮಾಡಿದ ಮಂಗಳೂರಿನ ಯುವಕನೊಬ್ಬ ಬರೋಬ್ಬರಿ 32 ಲಕ್ಷ ರೂ. ಹಣ ಕಳಕೊಂಡ ಘಟನೆ ನಡೆದಿದ್ದು, ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
35 ವರ್ಷದ ಮಂಗಳೂರಿನ ಯುವಕ ಮೊಬೈಲ್ ನಲ್ಲಿ ಫೇಸ್ಬುಕ್ ನೋಡುತ್ತಿದ್ದಾಗ ಕಾವ್ಯ ಶೆಟ್ಟಿ ಹೆಸರಲ್ಲಿ ಯುವತಿಯೊಬ್ಬಳು ಪರಿಚಯ ಆಗಿದ್ದಳು. ತಾನು ಮುಂಬೈನಲ್ಲಿ ಷೇರ್ ಟ್ರೇಡಿಂಗ್ ಕೆಲಸ ಮಾಡಿಕೊಂಡಿರುವುದಾಗಿ ತಿಳಿಸಿದ್ದು ಟ್ರೇಡಿಂಗ್ ನಲ್ಲಿ ಕೆಲಸ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಿದ್ದಾರೆ.
ಆಕೆ ಬಳಿಕ ವಾಟ್ಸಾಪ್ ನಂಬರ್ ನಿಂದ ಪಿರ್ಯಾದಿದಾರರಿಗೆ h5.capdynglobal.org ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗಲು ತಿಳಿಸಿದ್ದರು. ಸದ್ರಿ ಲಿಂಕ್ ಒತ್ತಿದಾಗ capdynglobal ಎಂಬ ಟ್ರೇಡಿಂಗ್ ಆ್ಯಪ್ ಓಪನ್ ಆಗಿತ್ತು. ತನ್ನ ಇ- ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿ ಸದ್ರಿ ಟ್ರೇಡಿಂಗ್ ಆಪ್ ನಲ್ಲಿ ಜಾಯಿನ್ ಆಗಿದ್ದರು. ಟ್ರೇಡಿಂಗ್ ನಲ್ಲಿ ಶೇರು ಪರ್ಚೇಸ್ ಮಾಡಲು ರೂ. 40,000/- ಹಣ ಪಾವತಿ ಮಾಡುವಂತೆ ತಿಳಿಸಿದ್ದು, ಅದರಂತೆ ಸೆ.13ರಂದು ಫೋನ್ ಫೇ ಮಾಡಿರುತ್ತಾರೆ. ಇದಕ್ಕೆ ಲಾಭಾಂಶವಾಗಿ ಇವರ ಖಾತೆಗೆ ರೂ. 9,504/- ಹಣ ಜಮೆ ಆಗಿರುತ್ತದೆ. ನಂತರ 2,00,000/- ರೂ. ಹಣ ಹಾಕಿದಾಗ ಇದಕ್ಕೆ ಲಾಭಾಂಶವಾಗಿ 23,760/- ರೂ ಹಣ ಜಮೆ ಆಗಿರುತ್ತದೆ.
ಇದರಿಂದ ಸದ್ರಿ ಶೇರು ಮಾರ್ಕೆಟ್ ನಲ್ಲಿ ಪಿರ್ಯಾದಿದಾರರಿಗೆ ನಂಬಿಕೆ ಉಂಟಾಗಿ ಹೆಚ್ಚಿನ ಲಾಭಾಂಶ ಪಡೆಯುವ ಉದ್ದೇಶದಿಂದ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 32,06,880/-ರೂ. ಹಣವನ್ನು 13-09-2025 ರಿಂದ 24-10-2025 ರ ವರೆಗೆ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಹಣ ವರ್ಗಾವಣೆ ಮಾಡಿರುತ್ತಾರೆ. ಬಳಿಕ ಹಣ ವಂಚನೆಯಾದ ಬಗ್ಗೆ ಯುವಕನಿಗೆ ತಿಳಿದಿದ್ದು ಅಪರಿಚಿತರು ನಕಲಿ ಶೇರ್ ಮಾರ್ಕೆಟಿಂಗ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಆನ್ ಲೈನ್ ಮೂಲಕ ಪಿರ್ಯಾದಿದಾರರಿಂದ ಮೋಸದಿಂದ ಹಣ ವರ್ಗಾಯಿಸಿಕೊಂಡು ಆನ್ ಲೈನ್ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
A 35-year-old man from Mangaluru lost ₹32 lakh after falling victim to an online investment scam operated through a fake stock trading platform. The incident has been registered at the city’s Cyber Crime Police Station.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm