ಬ್ರೇಕಿಂಗ್ ನ್ಯೂಸ್
05-11-25 05:27 pm Bangalore Correspondent ಕ್ರೈಂ
ಬೆಂಗಳೂರು, ನ.5 : ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೋಟ್ಯಂತರ ರೂಪಾಯಿ ಹಣವನ್ನು ದುರ್ಬಳಕೆ ಮಾಡಿದ ಪ್ರಕರಣದಲ್ಲಿ ಸೊಸೈಟಿ ಸಿಇಓ ಸೇರಿ ಇಬ್ಬರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೊಸೈಟಿ ಸಿಇಓ ಗೋಪಿನಾಥ್ ಹಾಗೂ ಅಕೌಂಟ್ ಸಿಬ್ಬಂದಿ ಲಕ್ಷ್ಮಿ ಜಗದೀಶ್ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಇಪಿಎಫ್ಒ ನೌಕರರೇ ಸೇರಿ 61 ವರ್ಷಗಳ ಹಿಂದೆ ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ರಚಿಸಿಕೊಂಡಿದ್ದರು. ಇಪಿಎಫ್ಒ ನೌಕರರಿಗೆ ಮಾತ್ರವೇ ಸೊಸೈಟಿಯಲ್ಲಿ ಹೂಡಿಕೆಗೆ ಅವಕಾಶ ನೀಡಲಾಗಿತ್ತು. ನೂರಾರು ಜನ ನೌಕರರು ತಮ್ಮ ಉಳಿತಾಯದ ಹಣವನ್ನು ಸೊಸೈಟಿಯಲ್ಲಿ ಹೂಡಿಕೆ ಮಾಡಿದ್ದರು. ಆ ಹಣವನ್ನು ಅವಶ್ಯಕತೆ ಇರುವ ನೌಕರರಿಗೆ ಸಾಲದ ರೂಪದಲ್ಲಿ ನೀಡುತ್ತಿದ್ದ ಸೊಸೈಟಿ, ಹೂಡಿಕೆ ಮಾಡಿದ್ದವರ ಖಾತೆಗಳಿಗೆ ಪ್ರತಿ ತಿಂಗಳು ಬಡ್ಡಿಯ ಹಣವನ್ನೂ ಸಂದಾಯ ಮಾಡುತ್ತಿತ್ತು. ಆದರೆ, 3 ತಿಂಗಳಿನಿಂದ ಬಡ್ಡಿಯ ಹಣ ಖಾತೆಗೆ ಸಂದಾಯವಾಗದಿದ್ದಾಗ ಹೂಡಿಕೆದಾರರು ತೆರಳಿ ಸೊಸೈಟಿಯ ಖಾತೆಯನ್ನು ಪರಿಶೀಲಿಸಿದ್ದರು. ಆಗ ಕೇವಲ 3 ಕೋಟಿ ರೂ. ಮಾತ್ರವೇ ಸಾಲ ನೀಡಲಾಗಿದ್ದು, ಉಳಿದ ಹಣ ಸೊಸೈಟಿಯ ಖಾತೆಯಿಂದ ಖಾಲಿಯಾಗಿರುವುದು ಪತ್ತೆಯಾಗಿತ್ತು.
ಹೂಡಿಕೆಯ ಹಣವನ್ನು ಸೊಸೈಟಿಯ ಖಾತೆಯಿಂದ ಅನಧಿಕೃತವಾಗಿ ಇತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಹೂಡಿಕೆದಾರರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸೊಸೈಟಿ ಸಿಇಓ ಮತ್ತು ಸಿಬಂದಿ ಕೈವಾಡ ಕಂಡುಬಂದಿದ್ದು ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸೊಸೈಟಿಯ ಸಿಇಒ ಗೋಪಿನಾಥ್, ಸಿಬ್ಬಂದಿಯಾದ ಜಗದೀಶ್, ಲಕ್ಷ್ಮೀ, ಲಿಂಗೇಗೌಡ ಹಾಗೂ ರಾಮಾನುಜ ಎಂಬವರ ಮನೆಗಳ ಮೇಲೆ ದಾಳಿ ನಡೆಸಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 300ಕ್ಕೂ ಅಧಿಕ ಠೇವಣಿದಾರರು ಹೂಡಿಕೆ ಮಾಡಿದ್ದ ಸುಮಾರು 70 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆರ್.ಆರ್. ನಗರ, ಜೆ.ಪಿ.ನಗರ, ಅಂಜನಾಪುರದಲ್ಲಿರುವ ಆರೋಪಿತರ ನಿವಾಸಗಳು, ರಿಚ್ಮಂಡ್ ಸರ್ಕಲ್ನಲ್ಲಿರುವ ಸೊಸೈಟಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ದಾಳಿ ವೇಳೆ ಚಿನ್ನಾಭರಣ, ನಗದು ಮತ್ತು ಹೂಡಿಕೆಗೆ ಸಂಬಂಧಿಸಿದ ಕೆಲ ದಾಖಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸೊಸೈಟಿಯ ಸಿಇಓ ಹಾಗೂ ಅಕೌಂಟೆಂಟ್ಗೆ ಸಂಬಂಧಿಸಿದ ವ್ಯಕ್ತಿಯನ್ನ ಬಂಧಿಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಆರೋಪಿಗಳ ಆರ್ಥಿಕ ಸ್ಥಿತಿಗತಿ, ಆಸ್ತಿ ವಿವರಗಳು ಹಾಗೂ ಅವರ ಆದಾಯವನ್ನ ಪರಿಶೀಲಿಸಿದಾಗ ಒಂದಕ್ಕೊಂದು ಹೊಂದಾಣಿಕೆಯಾಗುತ್ತಿಲ್ಲ. ಆರೋಪಿತರು ಹೊಂದಿರುವ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನ ವಶಪಡಿಸಿಕೊಂಡು ಪರಿಶೀಲನೆ ಮಾಡಲಾಗುತ್ತಿದೆ. ಎಷ್ಟು ಹಣ ವಂಚನೆಯಾಗಿದೆ ಮತ್ತು ಹಣ ಯಾವುದಕ್ಕೆಲ್ಲ ದುರ್ಬಳಕೆಯಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ತಿಳಿಸಿದ್ದಾರೆ.
A major financial scam has come to light in the EPFO Credit Co-operative Society in Bengaluru, where employees allegedly embezzled nearly ₹70 crore collected from staff savings over the past 60 years.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am