ಬ್ರೇಕಿಂಗ್ ನ್ಯೂಸ್
06-11-25 02:08 pm Mangalore Correspondent ಕ್ರೈಂ
Photo credits : AI PHOTO
ಪುತ್ತೂರು, ನ.6 : ಥಾಯ್ಲೆಂಡ್ ದೇಶದಲ್ಲಿ ಉದ್ಯೋಗ ಸಿಗುವ ಭರವಸೆಯಿಂದ ತೆರಳಿದ್ದ ಯುವಕನೊಬ್ಬ ಮೋಸದ ಜಾಲಕ್ಕೆ ಸಿಲುಕಿ ಥಾಯ್ಲೆಂಡ್ನಿಂದ ಮ್ಯಾನ್ಮಾರ್ ದೇಶಕ್ಕೆ ತಲುಪಿ ಅಲ್ಲಿ ಸೇನೆಯ ಕೈಗೆ ಸಿಕ್ಕಿಬಿದ್ದು ದಿಗ್ವಂಧನಕ್ಕೆ ಒಳಗಾದ ಘಟನೆ ನಡೆದಿದೆ.
ಮ್ಯಾನ್ಮಾರ್ ದೇಶದ ಸೇನೆ ನನ್ನನ್ನು ಬಂಧಿಸಿದ್ದು, ಮೊಬೈಲ್ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಮೋಸಕ್ಕೊಳಗಾದ ಯುವಕ ತಾಯಿಗೆ ಕರೆ ಮಾಡಿ ತಿಳಿಸಿದ್ದಾನೆ. ಉದ್ಯೋಗದ ಭರವಸೆ ನೀಡಿ ವಿದೇಶಕ್ಕೆ ಮಗನನ್ನು ಕಳುಹಿಸಿಕೊಟ್ಟು ಮೋಸ ಮಾಡಲಾಗಿದೆ ಎಂದು ಆಪಾದಿಸಿ ಯುವಕನ ತಾಯಿ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ದ.ಕ. ಜಿಲ್ಲೆಯ ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ಉಚ್ಚಿಲ ನಿವಾಸಿ ಹುಸೇನ್ ಎಂಬವರ ಪತ್ನಿ ಜುಬೇದಾ(42) ಪುತ್ತೂರು ನಗರ ಠಾಣೆಯಲ್ಲಿ ಪುತ್ತೂರಿನ ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಇಲಿಯಾಸ್ ಮತ್ತು ಆತನ ಸಹವರ್ತಿ ಯಶ್ ವಿರುದ್ಧ ದೂರು ನೀಡಿದ್ದಾರೆ. ಜುಬೇದಾ ಅವರ ಪುತ್ರ ಹೇಮದ್ ರಜಾಕ್ ದ್ವಿತೀಯ ಪಿಯುಸಿ ಕಲಿತು ಉದ್ಯೋಗ ಹುಡುಕುತ್ತಿರುವಾಗ ಟ್ರಾವೆಲ್ಸ್ ಸಂಸ್ಥೆಯ ಪರಿಚಯವಾಗಿದೆ. ಥಾಯ್ಲೆಂಡ್ನ ಗೇಮಿಂಗ್ ಕಂಪನಿಯಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ ಆರೋಪಿಗಳು 1,50,000 ರೂ. ಪಡೆದುಕೊಂಡು ಅ.17ರಂದು ಥಾಯ್ಲೆಂಡ್ಗೆ ಕಳಿಸಿಕೊಟ್ಟಿದ್ದರು. ಅಲ್ಲಿ ತಲುಪಿದ ತಕ್ಷಣ ಕಂಪನಿಯವರು ಕರೆದುಕೊಂಡು ಹೋಗುತ್ತಾರೆ ಎಂದೂ ತಿಳಿಸಿದ್ದರು.
ಅದರಂತೆ, ಹೇಮದ್ ರಜಾಕ್ ಮಂಗಳೂರಿನಿಂದ ದಿಲ್ಲಿಗೆ ತೆರಳಿ ಅಲ್ಲಿಂದ ಬ್ಯಾಂಕಾಕ್ ಗೆ ವಿಮಾನದಲ್ಲಿ ತೆರಳಿದ್ದಾನೆ. ಅಲ್ಲಿಗೆ ತಲುಪಿದ ಬಳಿಕ ಮಗ ಸಂಕಷ್ಟಕ್ಕೆ ಸಿಲುಕಿದ್ದಾನೆ ಎಂದು ಜುಬೇದಾ ದೂರಿನಲ್ಲಿ ತಿಳಿಸಿದ್ದಾರೆ. ಬ್ಯಾಂಕಾಕ್ ಏರ್ಪೋರ್ಟ್ ತಲುಪಿದ ಬಳಿಕ ಅ.18ರಂದು ಕೆಲವು ವ್ಯಕ್ತಿಗಳು ಕಾರಿನಲ್ಲಿ ನನ್ನನ್ನು ಬೇರೆ ಕಡೆಗೆ ಕರೆದೊಯ್ದಿದ್ದಾರೆ. ವಿಚಾರಿಸಿದಾಗ ಸರಿಯಾದ ಉತ್ತರ ನೀಡಿಲ್ಲ. ಸರಿಯಾಗಿ ನೀರು, ಆಹಾರ ನೀಡದೆ ಕಾಡಿನಲ್ಲಿ ಸುತ್ತಾಡಿಸಿ ಸತಾಯಿಸಿದ್ದು, ಯಾವುದೋ ಪ್ರದೇಶಕ್ಕೆ ಕರೆ ತಂದಿದ್ದಾರೆ.
ಥಾಯ್ಲೆಂಡ್ ನಲ್ಲಿ ಕೆಲಸದ ಭರವಸೆ ನೀಡಿದ್ದು, ಅವರು ನನ್ನನ್ನು ಮ್ಯಾನ್ಮಾರ್ ದೇಶಕ್ಕೆ ಕಳಿಸಿದ್ದಾರೆ ಎಂಬುದು ಈಗ ಗೊತ್ತಾಗಿದೆ. ಇಲ್ಲಿ ಮ್ಯಾನ್ಮಾರ್ ಸೇನೆ ನನ್ನನ್ನು ಮತ್ತು ಇತರ ಕೆಲವರನ್ನು ವಶಕ್ಕೆ ಪಡೆದು ಮೊಬೈಲ್ ಸ್ವಾಧೀನ ಪಡಿಸಿಕೊಂಡಿದ್ದಾರೆ. ನಾನೀಗ ಬೇರೊಬ್ಬರ ಮೊಬೈಲ್ ನಿಂದ ಫೋನ್ ಮಾಡಿ ಮಾತನಾಡುತ್ತಿದ್ದೇನೆ. ಉದ್ಯೋಗದ ಭರವಸೆ ನೀಡಿ ಮೋಸ ಮಾಡಿದ್ದಾರೆ ಎಂದು ಹೇಮದ್ ರಜಾಕ್ ತನ್ನ ತಾಯಿಗೆ ತಿಳಿಸಿದ್ದಾನೆ. ಮ್ಯಾನ್ಮಾರ್ ತಲುಪಿ ಅಲ್ಲಿ ಬಂಧನಕ್ಕೆ ಒಳಗಾದ ವಿಷಯ ತಿಳಿದ ಬಳಿಕ ಜುಬೇದಾ ಅವರು ಅ.29ರಂದು ಟ್ರಾವೆಲ್ಸ್ ಸಂಸ್ಥೆಯ ಇಲಿಯಾಸ್ಗೆ ಕರೆ ಮಾಡಿ ವಿಚಾರಿಸಿದ್ದಾರೆ. ನನಗೂ ಇದಕ್ಕೂ ಸಂಬಂಧವಿಲ್ಲ ಎಂದು ಆತ ಬೇಜವಾಬ್ದಾರಿಯಿಂದ ಉತ್ತರಿಸಿದ್ದಾನೆ ಎಂದು ಜುಬೇದಾ ದೂರಿನಲ್ಲಿ ತಿಳಿಸಿದ್ದಾರೆ.
A shocking case of international job fraud has come to light after a youth from Puttur, who went to Thailand for employment, was allegedly taken across the border into Myanmar and captured by the Myanmar army.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm