ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am