ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm