ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm