ಬ್ರೇಕಿಂಗ್ ನ್ಯೂಸ್
08-11-25 04:08 pm Mangaluru Staff ಕ್ರೈಂ
ಬಂಟ್ವಾಳ, ನ.7: ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.
ಅಲ್ಲದೆ ನಾನಾ ಮೊಬೈಲ್ ನಂಬರ್ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ತಾನು ಜಾಗ ಮಾರಿ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟಿದ್ದ ಹಣವನ್ನು ಹಿಂಪಡೆದು ಸೆ.29ರಿಂದ ಅ.10ರ ವರೆಗೆ ಅಪರಿಚಿತ ವ್ಯಕ್ತಿಗಳು ಸೂಚಿಸಿದ ಹಲವು ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.16 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದ್ದು, ಈ ಬಗ್ಗೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.
A woman from Bantwal has reportedly fallen victim to a massive online scam in which fraudsters posing as officials threatened her with a fake “digital arrest,” extorting a total of ₹1.16 crore. The case has been registered at the Cyber Economic and Narcotic (CEN) Police Station in Mangaluru.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm