ಬ್ರೇಕಿಂಗ್ ನ್ಯೂಸ್
08-11-25 04:08 pm Mangaluru Staff ಕ್ರೈಂ
ಬಂಟ್ವಾಳ, ನ.7: ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.
ಅಲ್ಲದೆ ನಾನಾ ಮೊಬೈಲ್ ನಂಬರ್ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ತಾನು ಜಾಗ ಮಾರಿ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟಿದ್ದ ಹಣವನ್ನು ಹಿಂಪಡೆದು ಸೆ.29ರಿಂದ ಅ.10ರ ವರೆಗೆ ಅಪರಿಚಿತ ವ್ಯಕ್ತಿಗಳು ಸೂಚಿಸಿದ ಹಲವು ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.16 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದ್ದು, ಈ ಬಗ್ಗೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.
A woman from Bantwal has reportedly fallen victim to a massive online scam in which fraudsters posing as officials threatened her with a fake “digital arrest,” extorting a total of ₹1.16 crore. The case has been registered at the Cyber Economic and Narcotic (CEN) Police Station in Mangaluru.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm