ಬ್ರೇಕಿಂಗ್ ನ್ಯೂಸ್
09-11-25 03:50 pm Mangalore Correspondent ಕ್ರೈಂ
ಮಂಗಳೂರು, ನ.9 : ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಜೆಪ್ಪಿನಮೊಗರು ನಿವಾಸಿ ರೋಷನ್ ಸಲ್ದಾನ ಎಂಬಾತನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ ಒಟ್ಟು 2.85 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ರೋಷನ್ ಸಲ್ದಾನ, ಪತ್ನಿ ಡ್ಯಾಫ್ಟಿ ನೀತು ಡಿಸೋಜ ಮತ್ತು ಇತರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳ ಆಧಾರದ ಮೇಲೆ ಇಡಿ ತನಿಖೆ ಪ್ರಾರಂಭಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 (ಪಿಎಂಎಲ್ಇ) ಅಡಿಯಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿಯ ಪ್ರಕಟಣೆ ತಿಳಿಸಿದೆ.
ಪಿಎಂಎಲ್ಇ ಸೆಕ್ಷನ್ 17ರ ಅಡಿಯಲ್ಲಿ ನಡೆಸಿದ ಶೋಧ ಕಾರ್ಯ ಮತ್ತು ನಂತರ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು, 2024 ಅಕ್ಟೋಬರ್ನಿಂದ 2025 ಜುಲೈ ನಡುವೆ ವಂಚನೆ ನಡೆಸಿರುವುದು ಪತ್ತೆಯಾಗಿದೆ. ರಾಜ್ಯ ಮತ್ತು ಹೊರ ರಾಜ್ಯದ ಹಲವು ಉದ್ಯಮಿಗಳಿಂದ ಸ್ಟ್ಯಾಂಪ್ ಡ್ಯೂಟಿ ನೆಪದಲ್ಲಿ ನಕಲಿ ಕಂಪನಿ ಹೆಸರಲ್ಲಿ 49 ಕೋಟಿ ರೂ. ಸಂಗ್ರಹಿಸಿದ್ದು, ಅವರಿಗೆ ಹೆಚ್ಚಿನ ಮೊತ್ತದ ಸಾಲ ಒದಗಿಸುವ ಭರವಸೆ ನೀಡಿದ್ದ. ಹೀಗೆ ಸಂಗ್ರಹಿಸಿದ ಹಣವನ್ನು ಆರೋಪಿಗಳು ತಮ್ಮ ವೈಯಕ್ತಿಕ ಉದ್ದೇಶ, ವ್ಯವಹಾರಕ್ಕೆ ಬಳಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆಗಸ್ಟ್ನಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಇಡಿ ಅಧಿಕಾರಿಗಳು, ಆರೋಪಿಗಳ ಬ್ಯಾಂಕ್ ಖಾತೆ, ಮೀನುಗಾರಿಕಾ ಬೋಟ್ ಮತ್ತು ಅವುಗಳ ಎಂಜಿನ್ಗಳ ರೂಪದಲ್ಲಿ ಅಂದಾಜು 9.5 ಕೋಟಿ ರೂ. ಮೊತ್ತವನ್ನು ವಶಕ್ಕೆ ಪಡೆದಿದೆ. ಇದರ ಮುಂದುವರಿದ ಭಾಗವಾಗಿ, ರೋಷನ್ ಸಲ್ಮಾನನಿಗೆ ಸೇರಿದ 2.14 ರೂ. ಕೋಟಿ ಮೌಲ್ಯದ ಆಸ್ತಿ, ಪಿ.ಎಂ. ಎಂಟರ್ಪ್ರೈಸಸ್ ಬ್ಯಾಂಕ್ ಖಾತೆಯ 70.8 ಲಕ್ಷ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
The Enforcement Directorate (ED) has seized assets worth ₹2.85 crore, including a boat and bank accounts, belonging to Roshan Saldanha, a resident of Jeppinamogaru, who is the main accused in a multi-crore fraud case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am