ಬ್ರೇಕಿಂಗ್ ನ್ಯೂಸ್
29-12-20 12:03 pm Headline Karnataka News Network ಕ್ರೈಂ
ಮುಂಬೈ, ಡಿ.29: "ರಿಪಬ್ಲಿಕ್ ಟಿವಿ ಮಾಲಕ ಹಾಗೂ ಸಂಪಾದಕ ಅರ್ನಬ್ ಗೋಸ್ವಾಮಿ ಟಿಆರ್ಪಿ ತಿದ್ದಲು ನನಗೆ ಲಂಚ ನೀಡಿದ್ದು ನಿಜ" ಎಂದು ಟಿಆರ್ಪಿ ಹಗರಣದಲ್ಲಿ ಬಂಧಿತನಾಗಿರುವ ಬ್ರಾಡ್ಕಾಸ್ಟ್ ರೀಸರ್ಚ್ ಆಡಿಯನ್ಸ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಓ ಪಾರ್ಥ ದಾಸ್ಗುಪ್ತಾ ಪೊಲೀಸ್ ತನಿಖೆಯ ವೇಳೆ ಬಾಯಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
"ತಮ್ಮ ಚಾನೆಲ್ಗೆ ಅಧಿಕ ಟಿಆರ್ಪಿ ನೀಡುವ ಸಲುವಾಗಿ ಲಕ್ಷಾಂತರ ರೂಪಾಯಿ ನಗದು ಹಾಗೂ ದುಬಾರಿ ವಾಚು ನೀಡಿದ್ದರು" ಎಂದು ವಿಚಾರಣೆ ವೇಳೆ ಪಾರ್ಥ ದಾಸ್ಗುಪ್ತಾ ಅವರು ಮುಂಬೈ ಪೊಲೀಸ್ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪಾರ್ಥ ದಾಸ್ಗುಪ್ತಾ ಮನೆಯಿಂದ ಮೂರು ಕೆಜಿ ಬೆಳ್ಳಿಯನ್ನು ಕೂಡಾ ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. 2013ರಿಂದ 2019ರವರೆಗೆ ದಾಸ್ಗುಪ್ತಾ ಬಿಎಆರ್ಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು. ಅರ್ನಬ್ ಗೋಸ್ವಾಮಿ ತಮ್ಮ ಇಂಗ್ಲಿಷ್ ಚಾನೆಲ್ ರಿಪಬ್ಲಿಕ್ ಟಿವಿ ಮತ್ತು ಹಿಂದಿ ಚಾನಲ್ ರಿಪಬ್ಲಿಕ್ ಭಾರತ್ಗೆ ಟಿಆರ್ಪಿ ನೆರವು ನೀಡಲು ನೀಡಿದ ಲಂಚದ ಹಣದಲ್ಲಿ ಈ ಬೆಳ್ಳಿ ಖರೀದಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಈ ತಿಂಗಳ 24ರಂದು ಗೋವಾದಿಂದ ಪುಣೆಗೆ ಹೋಗುತ್ತಿದ್ದ ದಾಸ್ಗುಪ್ತಾ (55) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ಅಕ್ರಮದಲ್ಲಿ ಅರ್ನಬ್ ಗೋಸ್ವಾಮಿ ಜತೆ ದಾಸ್ಗುಪ್ತ ಶಾಮೀಲಾಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
"ಟಿಆರ್ಪಿ ಮಾಪನಕ್ಕೆ ಬಾರೋಮೀಟರ್ ಅಳವಡಿಸಿದ್ದ ಮನೆಗಳ ಬಗೆಗಿನ ರಹಸ್ಯ ಮಾಹಿತಿಯನ್ನು ದಾಸ್ಗುಪ್ತಾ, ಅರ್ನಬ್ ಜತೆ ಹಂಚಿಕೊಂಡಿದ್ದರು. ಈ ದತ್ತಾಂಶ ಬಳಸಿಕೊಂಡು ಮನೆಮಂದಿಗೆ ಲಂಚ ನೀಡಿ, ಮನೆಮಂದಿಗೆ ಇಂಗ್ಲಿಷ್ ಭಾಷೆಯ ಅರಿವು ಇಲ್ಲದಿದ್ದರೂ ಆ ಚಾನೆಲ್ ಆನ್ ಮಾಡಿ ಇಡುವಂತೆ ಅರ್ನಬ್ ಕೇಳಿಕೊಂಡಿದ್ದರು. ಕೆಲ ಮನೆಗಳು ಮುಚ್ಚಿದ್ದರೂ ಆ ಮನೆಯಲ್ಲಿ ಚಾನಲ್ ಮಾತ್ರ ಆನ್ ಇರುತ್ತಿತ್ತು. ಟಿಆರ್ಪಿ ಹಗರಣದಲ್ಲಿ ಶಾಮೀಲಾದವರ ಸೂಚನೆ ಮೇರೆಗೆ ಹೀಗೆ ಮಾಡಲಾಗುತ್ತಿತ್ತು" ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ವಿವರಿಸಿದ್ದಾರೆ.
In a remand report submitted before a court on Monday, the Mumbai Police said that Republic TV editor-in-chief Arnab Goswami had paid “lakhs of rupees” to Partho Dasgupta, former CEO of the Broadcast Audience Research Council (BARC), to “increase” the Television Rating Points (TRPs) of the two Republic news channels.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm