ಬ್ರೇಕಿಂಗ್ ನ್ಯೂಸ್
13-11-25 10:09 pm Mangalore Correspondent ಕ್ರೈಂ
ಮಂಗಳೂರು, ನ.13 : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನಲ್ಲಿ ಮತ್ತೊಬ್ಬ ಹಿರಿಯ ಮಹಿಳೆ ಹಣ ಕಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಹಿರಿಯ ಮಹಿಳೆಯೊಬ್ಬರು ಪಕ್ಕದ ಮನೆಯ ಮಹಿಳೆಯಿಂದಾಗಿ ಡಿಜಿಟಲ್ ಅರೆಸ್ಟ್ ನಿಂದ ಹಣ ಕಳೆದುಕೊಳ್ಳುವದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದರು. ಇದೀಗ ಮತ್ತೊಬ್ಬ ಹಿರಿಯ ಮಹಿಳೆ ಡಿಜಿಟಲ್ ಅರೆಸ್ಟ್ ನಲ್ಲಿ ಬರೋಬ್ಬರಿ 1.81 ಕೋಟಿ ಹಣ ಕಳಕೊಂಡಿದ್ದಾರೆ.
ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 58 ವರ್ಷದ ಮಹಿಳೆಯೊಬ್ಬರಿಗೆ ಅ.24 ರಂದು ಅವರ ಮೊಬೈಲಿಗೆ ಅಪರಿಚಿತ ವ್ಯಕ್ತಿ (ಮೊಬೈಲ್ ನಂಬ್ರ- 9381017412) ಕರೆ ಮಾಡಿ ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿ ಮನಿ ಲಾಂಡರಿಂಗ್ ಕೇಸ್ ಹಾಗೂ ಹ್ಯುಮನ್ ಟ್ರಾಫಿಕಿಂಗ್ ಕೇಸ್ ನಲ್ಲಿ ಕಮಿಷನ್ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, ನೀವು ಸಸ್ಪೆಕ್ಟ್ ಇದ್ದೀರಿ, ತನಿಖೆಯ ಬಗ್ಗೆ ನೀವು ವಿಡಿಯೋ ಕಾಲ್ ನಲ್ಲಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಇದರಿಂದ ಭಯಗೊಂಡ ಮಹಿಳೆ ವಿಡಿಯೋ ಕಾಲ್ ನಲ್ಲಿದ್ದು ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸಪ್ ಕಳುಹಿಸಲು ತಿಳಿಸಿದ್ದಾರೆ. ನಂತರ ವಿನೋದ್ ರಾಥೋಡ್ ಹಾಗೂ ರಾಜೇಶ್ ಮಿಶ್ರಾ ಎಂಬ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿ ವಾಟ್ಸ್ ಆಪ್ ವಿಡಿಯೋ ಕರೆ ಮಾಡಿ ಮಹಿಳೆಯ ವೈಯಕ್ತಿಕ ವಿವರಗಳನ್ನು ಹಾಗೂ ಬ್ಯಾಂಕ್ ವಿವರಗಳ ಬಗ್ಗೆ ವಿಚಾರಿಸಿರುತ್ತಾರೆ. ಮರು ದಿನ ಪಿರ್ಯಾದಿದಾರರಿಗೆ ಕರೆ ಮಾಡಿ ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ತಿಳಿಸಿ ಹಣ ಪಾವತಿಸುವಂತೆ ಹಾಗೂ ಪಡೆದುಕೊಂಡ ಎಲ್ಲಾ ಹಣವನ್ನು ವಾಪಾಸು ನೀಡುವಂತೆ ತಿಳಿಸಿರುತ್ತಾರೆ.
ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಹೇಳಿ ಪಿರ್ಯಾದಿದಾರರಿಗೆ ಭಯ ಹುಟ್ಟಿಸಿ ಬೆದರಿಕೆ ಹಾಕಿರುತ್ತಾರೆ. ಬಳಿಕ ಅಪರಿಚಿತ ವ್ಯಕ್ತಿಗಳು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ದಿನಾಂಕ: 28-10-2025 ರಿಂದ 11-11-2025 ರವರೆಗೆ ಹಂತ ಹಂತವಾಗಿ ಒಟ್ಟು 1,81,50,000/- ರೂ.ಗಳನ್ನು RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಹಣ ನೀಡಿದ ಬಳಿಕ ಆರೋಪಿಗಳು ಸಂಪರ್ಕ ಕಡಿತಗೊಳಿಸಿದ್ದು ಮಹಿಳೆಗೆ ಮೋಸದ ಅರಿವಾಗಿ ಪೊಲೀಸ್ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಹಿರಿಯ ನಾಗರಿಕರನ್ನು ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಯಾಮಾರಿಸುವುದು ಹೆಚ್ಚುತ್ತಿದ್ದು ಪೊಲೀಸರು ಕೂಡ ಅಸಹಾಯಕತೆ ತೋರಿದ್ದಾರೆ.
The digital arrest scam continues to haunt Mangaluru, with yet another senior woman falling victim — losing a staggering ₹1.81 crore to cybercriminals posing as Mumbai police officials. Just recently, another elderly woman narrowly escaped losing her money in a similar scam. However, this latest case marks one of the biggest losses reported under this fraud in the region.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm