ಬ್ರೇಕಿಂಗ್ ನ್ಯೂಸ್
13-11-25 10:09 pm Mangalore Correspondent ಕ್ರೈಂ
ಮಂಗಳೂರು, ನ.13 : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನಲ್ಲಿ ಮತ್ತೊಬ್ಬ ಹಿರಿಯ ಮಹಿಳೆ ಹಣ ಕಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಹಿರಿಯ ಮಹಿಳೆಯೊಬ್ಬರು ಪಕ್ಕದ ಮನೆಯ ಮಹಿಳೆಯಿಂದಾಗಿ ಡಿಜಿಟಲ್ ಅರೆಸ್ಟ್ ನಿಂದ ಹಣ ಕಳೆದುಕೊಳ್ಳುವದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದರು. ಇದೀಗ ಮತ್ತೊಬ್ಬ ಹಿರಿಯ ಮಹಿಳೆ ಡಿಜಿಟಲ್ ಅರೆಸ್ಟ್ ನಲ್ಲಿ ಬರೋಬ್ಬರಿ 1.81 ಕೋಟಿ ಹಣ ಕಳಕೊಂಡಿದ್ದಾರೆ.
ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 58 ವರ್ಷದ ಮಹಿಳೆಯೊಬ್ಬರಿಗೆ ಅ.24 ರಂದು ಅವರ ಮೊಬೈಲಿಗೆ ಅಪರಿಚಿತ ವ್ಯಕ್ತಿ (ಮೊಬೈಲ್ ನಂಬ್ರ- 9381017412) ಕರೆ ಮಾಡಿ ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿ ಮನಿ ಲಾಂಡರಿಂಗ್ ಕೇಸ್ ಹಾಗೂ ಹ್ಯುಮನ್ ಟ್ರಾಫಿಕಿಂಗ್ ಕೇಸ್ ನಲ್ಲಿ ಕಮಿಷನ್ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, ನೀವು ಸಸ್ಪೆಕ್ಟ್ ಇದ್ದೀರಿ, ತನಿಖೆಯ ಬಗ್ಗೆ ನೀವು ವಿಡಿಯೋ ಕಾಲ್ ನಲ್ಲಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಇದರಿಂದ ಭಯಗೊಂಡ ಮಹಿಳೆ ವಿಡಿಯೋ ಕಾಲ್ ನಲ್ಲಿದ್ದು ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸಪ್ ಕಳುಹಿಸಲು ತಿಳಿಸಿದ್ದಾರೆ. ನಂತರ ವಿನೋದ್ ರಾಥೋಡ್ ಹಾಗೂ ರಾಜೇಶ್ ಮಿಶ್ರಾ ಎಂಬ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿ ವಾಟ್ಸ್ ಆಪ್ ವಿಡಿಯೋ ಕರೆ ಮಾಡಿ ಮಹಿಳೆಯ ವೈಯಕ್ತಿಕ ವಿವರಗಳನ್ನು ಹಾಗೂ ಬ್ಯಾಂಕ್ ವಿವರಗಳ ಬಗ್ಗೆ ವಿಚಾರಿಸಿರುತ್ತಾರೆ. ಮರು ದಿನ ಪಿರ್ಯಾದಿದಾರರಿಗೆ ಕರೆ ಮಾಡಿ ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ತಿಳಿಸಿ ಹಣ ಪಾವತಿಸುವಂತೆ ಹಾಗೂ ಪಡೆದುಕೊಂಡ ಎಲ್ಲಾ ಹಣವನ್ನು ವಾಪಾಸು ನೀಡುವಂತೆ ತಿಳಿಸಿರುತ್ತಾರೆ.
ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಹೇಳಿ ಪಿರ್ಯಾದಿದಾರರಿಗೆ ಭಯ ಹುಟ್ಟಿಸಿ ಬೆದರಿಕೆ ಹಾಕಿರುತ್ತಾರೆ. ಬಳಿಕ ಅಪರಿಚಿತ ವ್ಯಕ್ತಿಗಳು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ದಿನಾಂಕ: 28-10-2025 ರಿಂದ 11-11-2025 ರವರೆಗೆ ಹಂತ ಹಂತವಾಗಿ ಒಟ್ಟು 1,81,50,000/- ರೂ.ಗಳನ್ನು RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಹಣ ನೀಡಿದ ಬಳಿಕ ಆರೋಪಿಗಳು ಸಂಪರ್ಕ ಕಡಿತಗೊಳಿಸಿದ್ದು ಮಹಿಳೆಗೆ ಮೋಸದ ಅರಿವಾಗಿ ಪೊಲೀಸ್ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಹಿರಿಯ ನಾಗರಿಕರನ್ನು ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಯಾಮಾರಿಸುವುದು ಹೆಚ್ಚುತ್ತಿದ್ದು ಪೊಲೀಸರು ಕೂಡ ಅಸಹಾಯಕತೆ ತೋರಿದ್ದಾರೆ.
The digital arrest scam continues to haunt Mangaluru, with yet another senior woman falling victim — losing a staggering ₹1.81 crore to cybercriminals posing as Mumbai police officials. Just recently, another elderly woman narrowly escaped losing her money in a similar scam. However, this latest case marks one of the biggest losses reported under this fraud in the region.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am