ಬ್ರೇಕಿಂಗ್ ನ್ಯೂಸ್
14-11-25 05:32 pm HK News Desk ಕ್ರೈಂ
ಬೆಳಗಾವಿ, ನ.14 : ಅಮೆರಿಕ ನಾಗರಿಕರ ಮೊಬೈಲ್ ಹಾಗೂ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ವಂಚಿಸುತ್ತಿದ್ದ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಬೆಳಗಾವಿ ಸೈಬರ್ ಅಪರಾಧ ವಿಭಾಗದ ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದು, 37 ಲ್ಯಾಪ್ಟಾಪ್, ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಅಜಂ ನಗರದ ಸರ್ಕಲ್ ಬಳಿಯ ಕುಮಾರ್ ಹಾಲ್ನಲ್ಲಿ ಅನಧಿಕೃತ ಕಾಲ್ ಸೆಂಟರ್ ನಿರ್ವಹಿಸುತ್ತಿರುವ ಕುರಿತು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸೈಬರ್ ಪೊಲೀಸರು ದಾಳಿ ನಡೆಸಿ, ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಜನರಿಗೆ ವಂಚಿಸಿ ಹಣ ವರ್ಗಾಯಿಸಿಕೊಳ್ಳುತ್ತಿದ್ದ ಜಾಲ ಭೇದಿಸಿದ್ದಾರೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ರಾವ್ ಭೋರಸೆ ತಿಳಿಸಿದ್ದಾರೆ.



ಆರೇಳು ತಿಂಗಳಿಂದ ಈ ಕಾಲ್ ಸೆಂಟರ್ ಕಾರ್ಯ ನಿರ್ವಹಿಸುತ್ತಿದ್ದು, 33 ಜನ ಕೆಲಸ ಮಾಡುತ್ತಿದ್ದರು. ಇವರು ಅಮೆರಿಕದ ಪ್ರಜೆಗಳಿಗೆ ಕರೆ ಮಾಡಿ ಶೇರ್ ಟ್ರೇಡಿಂಗ್, ಹೊಸ ಮೊಬೈಲ್ ಆಫರ್ ಸೇರಿ ನಾನಾ ಆಮಿಷ ಒಡ್ಡಿ ಹಣ ದೋಚುತ್ತಿದ್ದರು. ದಾಳಿ ವೇಳೆ ಪತ್ತೆಯಾದ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಪರಿಶೀಲಿಸಿದಾಗ ವಿಶೇಷ ಸಾಫ್ಟ್ವೇರ್ ಬಳಸಿ ಅಮೆರಿಕದ ಅಸಂಖ್ಯಾತ ಮೊಬೈಲ್ಗಳಿಗೆ ಕರೆ ಮಾಡಿರುವುದು ಗೊತ್ತಾಗಿದೆ. ಇವರು ತಮ್ಮ ನೈಜ ಲೊಕೇಷನ್ ಮಾಹಿತಿ ಮರೆಮಾಚಿ ನಕಲಿ ಲೊಕೇಷನ್ ತೋರಿಸುವ ಸಾಫ್ಟ್ವೇರ್ ಬಳಕೆ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಹೊರ ರಾಜ್ಯದವರು
ಬಂಧಿತ ಆರೋಪಿಗಳು 25ರಿಂದ 35 ವರ್ಷದವರಾಗಿದ್ದು, ಅಸ್ಸಾಂ, ನಾಗಾಲ್ಯಾಂಡ್, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಸೇರಿ ಇತರ ರಾಜ್ಯದವರಿದ್ದಾರೆ. ಬಂಧಿತರಿಂದ 6.50 ಲಕ್ಷ ರೂ. ಮೌಲ್ಯದ 37 ಲ್ಯಾಪ್ಟಾಪ್, 1.50 ಲಕ್ಷ ರೂ. ಮೌಲ್ಯದ 37 ಮೊಬೈಲ್, 10 ಸಾವಿರ ರೂ. ಮೌಲ್ಯದ 3 ವೈಫೈ ರೂಟರ್ ವಶಕ್ಕೆ ಪಡೆಯಲಾಗಿದೆ. ಸಿಐಡಿ ನೆರವು ಪಡೆದು ಅಮೆರಿಕದಲ್ಲಿ ದಾಖಲಾದ ಪ್ರಕರಣಗಳ ಪರಿಶೀಲನೆಗೆ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
In a major crackdown, the Belagavi Cyber Crime Police raided an illegal call centre that was cheating US citizens through online trading and investment scams. A total of 33 accused have been arrested, and 37 laptops and multiple mobile phones have been seized.a
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm