ಬ್ರೇಕಿಂಗ್ ನ್ಯೂಸ್
14-11-25 05:32 pm HK News Desk ಕ್ರೈಂ
ಬೆಳಗಾವಿ, ನ.14 : ಅಮೆರಿಕ ನಾಗರಿಕರ ಮೊಬೈಲ್ ಹಾಗೂ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ವಂಚಿಸುತ್ತಿದ್ದ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಬೆಳಗಾವಿ ಸೈಬರ್ ಅಪರಾಧ ವಿಭಾಗದ ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದು, 37 ಲ್ಯಾಪ್ಟಾಪ್, ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಅಜಂ ನಗರದ ಸರ್ಕಲ್ ಬಳಿಯ ಕುಮಾರ್ ಹಾಲ್ನಲ್ಲಿ ಅನಧಿಕೃತ ಕಾಲ್ ಸೆಂಟರ್ ನಿರ್ವಹಿಸುತ್ತಿರುವ ಕುರಿತು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸೈಬರ್ ಪೊಲೀಸರು ದಾಳಿ ನಡೆಸಿ, ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಜನರಿಗೆ ವಂಚಿಸಿ ಹಣ ವರ್ಗಾಯಿಸಿಕೊಳ್ಳುತ್ತಿದ್ದ ಜಾಲ ಭೇದಿಸಿದ್ದಾರೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ರಾವ್ ಭೋರಸೆ ತಿಳಿಸಿದ್ದಾರೆ.



ಆರೇಳು ತಿಂಗಳಿಂದ ಈ ಕಾಲ್ ಸೆಂಟರ್ ಕಾರ್ಯ ನಿರ್ವಹಿಸುತ್ತಿದ್ದು, 33 ಜನ ಕೆಲಸ ಮಾಡುತ್ತಿದ್ದರು. ಇವರು ಅಮೆರಿಕದ ಪ್ರಜೆಗಳಿಗೆ ಕರೆ ಮಾಡಿ ಶೇರ್ ಟ್ರೇಡಿಂಗ್, ಹೊಸ ಮೊಬೈಲ್ ಆಫರ್ ಸೇರಿ ನಾನಾ ಆಮಿಷ ಒಡ್ಡಿ ಹಣ ದೋಚುತ್ತಿದ್ದರು. ದಾಳಿ ವೇಳೆ ಪತ್ತೆಯಾದ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಪರಿಶೀಲಿಸಿದಾಗ ವಿಶೇಷ ಸಾಫ್ಟ್ವೇರ್ ಬಳಸಿ ಅಮೆರಿಕದ ಅಸಂಖ್ಯಾತ ಮೊಬೈಲ್ಗಳಿಗೆ ಕರೆ ಮಾಡಿರುವುದು ಗೊತ್ತಾಗಿದೆ. ಇವರು ತಮ್ಮ ನೈಜ ಲೊಕೇಷನ್ ಮಾಹಿತಿ ಮರೆಮಾಚಿ ನಕಲಿ ಲೊಕೇಷನ್ ತೋರಿಸುವ ಸಾಫ್ಟ್ವೇರ್ ಬಳಕೆ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಹೊರ ರಾಜ್ಯದವರು
ಬಂಧಿತ ಆರೋಪಿಗಳು 25ರಿಂದ 35 ವರ್ಷದವರಾಗಿದ್ದು, ಅಸ್ಸಾಂ, ನಾಗಾಲ್ಯಾಂಡ್, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಸೇರಿ ಇತರ ರಾಜ್ಯದವರಿದ್ದಾರೆ. ಬಂಧಿತರಿಂದ 6.50 ಲಕ್ಷ ರೂ. ಮೌಲ್ಯದ 37 ಲ್ಯಾಪ್ಟಾಪ್, 1.50 ಲಕ್ಷ ರೂ. ಮೌಲ್ಯದ 37 ಮೊಬೈಲ್, 10 ಸಾವಿರ ರೂ. ಮೌಲ್ಯದ 3 ವೈಫೈ ರೂಟರ್ ವಶಕ್ಕೆ ಪಡೆಯಲಾಗಿದೆ. ಸಿಐಡಿ ನೆರವು ಪಡೆದು ಅಮೆರಿಕದಲ್ಲಿ ದಾಖಲಾದ ಪ್ರಕರಣಗಳ ಪರಿಶೀಲನೆಗೆ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
In a major crackdown, the Belagavi Cyber Crime Police raided an illegal call centre that was cheating US citizens through online trading and investment scams. A total of 33 accused have been arrested, and 37 laptops and multiple mobile phones have been seized.a
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am