ಬ್ರೇಕಿಂಗ್ ನ್ಯೂಸ್
14-11-25 05:32 pm HK News Desk ಕ್ರೈಂ
ಬೆಳಗಾವಿ, ನ.14 : ಅಮೆರಿಕ ನಾಗರಿಕರ ಮೊಬೈಲ್ ಹಾಗೂ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ವಂಚಿಸುತ್ತಿದ್ದ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಬೆಳಗಾವಿ ಸೈಬರ್ ಅಪರಾಧ ವಿಭಾಗದ ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದು, 37 ಲ್ಯಾಪ್ಟಾಪ್, ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಅಜಂ ನಗರದ ಸರ್ಕಲ್ ಬಳಿಯ ಕುಮಾರ್ ಹಾಲ್ನಲ್ಲಿ ಅನಧಿಕೃತ ಕಾಲ್ ಸೆಂಟರ್ ನಿರ್ವಹಿಸುತ್ತಿರುವ ಕುರಿತು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸೈಬರ್ ಪೊಲೀಸರು ದಾಳಿ ನಡೆಸಿ, ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಜನರಿಗೆ ವಂಚಿಸಿ ಹಣ ವರ್ಗಾಯಿಸಿಕೊಳ್ಳುತ್ತಿದ್ದ ಜಾಲ ಭೇದಿಸಿದ್ದಾರೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ರಾವ್ ಭೋರಸೆ ತಿಳಿಸಿದ್ದಾರೆ.



ಆರೇಳು ತಿಂಗಳಿಂದ ಈ ಕಾಲ್ ಸೆಂಟರ್ ಕಾರ್ಯ ನಿರ್ವಹಿಸುತ್ತಿದ್ದು, 33 ಜನ ಕೆಲಸ ಮಾಡುತ್ತಿದ್ದರು. ಇವರು ಅಮೆರಿಕದ ಪ್ರಜೆಗಳಿಗೆ ಕರೆ ಮಾಡಿ ಶೇರ್ ಟ್ರೇಡಿಂಗ್, ಹೊಸ ಮೊಬೈಲ್ ಆಫರ್ ಸೇರಿ ನಾನಾ ಆಮಿಷ ಒಡ್ಡಿ ಹಣ ದೋಚುತ್ತಿದ್ದರು. ದಾಳಿ ವೇಳೆ ಪತ್ತೆಯಾದ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಪರಿಶೀಲಿಸಿದಾಗ ವಿಶೇಷ ಸಾಫ್ಟ್ವೇರ್ ಬಳಸಿ ಅಮೆರಿಕದ ಅಸಂಖ್ಯಾತ ಮೊಬೈಲ್ಗಳಿಗೆ ಕರೆ ಮಾಡಿರುವುದು ಗೊತ್ತಾಗಿದೆ. ಇವರು ತಮ್ಮ ನೈಜ ಲೊಕೇಷನ್ ಮಾಹಿತಿ ಮರೆಮಾಚಿ ನಕಲಿ ಲೊಕೇಷನ್ ತೋರಿಸುವ ಸಾಫ್ಟ್ವೇರ್ ಬಳಕೆ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಹೊರ ರಾಜ್ಯದವರು
ಬಂಧಿತ ಆರೋಪಿಗಳು 25ರಿಂದ 35 ವರ್ಷದವರಾಗಿದ್ದು, ಅಸ್ಸಾಂ, ನಾಗಾಲ್ಯಾಂಡ್, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಸೇರಿ ಇತರ ರಾಜ್ಯದವರಿದ್ದಾರೆ. ಬಂಧಿತರಿಂದ 6.50 ಲಕ್ಷ ರೂ. ಮೌಲ್ಯದ 37 ಲ್ಯಾಪ್ಟಾಪ್, 1.50 ಲಕ್ಷ ರೂ. ಮೌಲ್ಯದ 37 ಮೊಬೈಲ್, 10 ಸಾವಿರ ರೂ. ಮೌಲ್ಯದ 3 ವೈಫೈ ರೂಟರ್ ವಶಕ್ಕೆ ಪಡೆಯಲಾಗಿದೆ. ಸಿಐಡಿ ನೆರವು ಪಡೆದು ಅಮೆರಿಕದಲ್ಲಿ ದಾಖಲಾದ ಪ್ರಕರಣಗಳ ಪರಿಶೀಲನೆಗೆ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
In a major crackdown, the Belagavi Cyber Crime Police raided an illegal call centre that was cheating US citizens through online trading and investment scams. A total of 33 accused have been arrested, and 37 laptops and multiple mobile phones have been seized.a
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm