ಬ್ರೇಕಿಂಗ್ ನ್ಯೂಸ್
17-11-25 12:54 pm Mangalore Correspondent ಕ್ರೈಂ
ಮಂಗಳೂರು, ನ.16 : ಪಾರ್ಸೆಲ್ ಇದೆ, ಅದರ ಕಸ್ಟಮ್ಸ್ ಸುಂಕ ಕಟ್ಟಬೇಕೆಂದು ಹೇಳಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಸೈಬರ್ ಖದೀಮರ ಸೋಗಿನಲ್ಲಿ 7.27 ಲಕ್ಷ ಹಣ ಪೀಕಿಸಿದ ಪ್ರಕರಣದಲ್ಲಿ ತ್ರಿಪುರಾ ಮತ್ತು ಮಣಿಪುರ ಮೂಲದ ಇಬ್ಬರನ್ನು ಮಂಗಳೂರು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಪಾರ್ಸೆಲ್ ಇದೆಯೆಂದು ಹೇಳಿ ಕಸ್ಟಮ್ಸ್ ಸುಂಕದ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿದ್ದಾರೆ. ತ್ರಿಪುರಾ ರಾಜ್ಯದ ಧಲೈ ನಿವಾಸಿ ಡಾಮೆಂಜಯ್ ರಿಯಾಂಗ್ (27) ಮತ್ತು ಮಣಿಪುರದ ಕಾಂಗ್ ಪೋಕ್ಪಿ ಜಿಲ್ಲೆಯ ಮ್ಯಾಂಗ್ಟೆ ರೀಲ್ ಕೋಮ್ (33) ಬಂಧಿತರು.
ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದು ಪರಿಶೀಲಿಸಿದಾಗ ಆರೋಪಿಗಳ ಮಾಹಿತಿ ಸಿಕ್ಕಿತ್ತು. ಆರೋಪಿ ಡಾಮೆಂಜಯ್ ನ.13ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಆಧಾರದಲ್ಲಿ ಮ್ಯಾಂಗ್ಟೆ ಎಂಬಾತನನ್ನು ನ.15 ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.
ತನಿಖೆಯ ವೇಳೆ ಆರೋಪಿತ ಮಾಂಗ್ಟೆ ಬೇರೆ ಬೇರೆ ರಾಜ್ಯಗಳಲ್ಲಿ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಮಾಡಿರುವುದು ಹಾಗೂ 250ಕ್ಕು ಹೆಚ್ಚು ಸಿಮ್ ಕಾರ್ಡ್ ಗಳನ್ನು ಹೊಂದಿದ್ದು ಅದನ್ನು ಸೈಬರ್ ವಂಚನೆಗೆ ಬಳಕೆ ಮಾಡಿರುವುದು ಕಂಡುಬಂದಿದೆ. ಸದ್ರಿ ಆರೋಪಿತನಿಂದ 08-ಮೊಬೈಲ್ ಫೋನ್, 20- ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು,18- ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು,ಬ11- ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7- ಸಿಮ್ ಕಾರ್ಡ್ ಗಳನ್ನು ಸ್ವಾಧೀನಪಡಿಸಲಾಗಿದೆ. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದಾರೆ.
Mangaluru CEN Police have arrested two individuals from Tripura and Manipur for duping a man of ₹7.27 lakh by claiming he needed to pay customs charges for a fake parcel. Investigation revealed the accused were linked to over 300 illegal bank accounts and 250 SIM cards used for cyber fraud. Multiple mobile phones, debit cards, passbooks, and SIM cards were seized during the operation.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am