ಬ್ರೇಕಿಂಗ್ ನ್ಯೂಸ್
17-11-25 12:54 pm Mangalore Correspondent ಕ್ರೈಂ
ಮಂಗಳೂರು, ನ.16 : ಪಾರ್ಸೆಲ್ ಇದೆ, ಅದರ ಕಸ್ಟಮ್ಸ್ ಸುಂಕ ಕಟ್ಟಬೇಕೆಂದು ಹೇಳಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಸೈಬರ್ ಖದೀಮರ ಸೋಗಿನಲ್ಲಿ 7.27 ಲಕ್ಷ ಹಣ ಪೀಕಿಸಿದ ಪ್ರಕರಣದಲ್ಲಿ ತ್ರಿಪುರಾ ಮತ್ತು ಮಣಿಪುರ ಮೂಲದ ಇಬ್ಬರನ್ನು ಮಂಗಳೂರು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಪಾರ್ಸೆಲ್ ಇದೆಯೆಂದು ಹೇಳಿ ಕಸ್ಟಮ್ಸ್ ಸುಂಕದ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿದ್ದಾರೆ. ತ್ರಿಪುರಾ ರಾಜ್ಯದ ಧಲೈ ನಿವಾಸಿ ಡಾಮೆಂಜಯ್ ರಿಯಾಂಗ್ (27) ಮತ್ತು ಮಣಿಪುರದ ಕಾಂಗ್ ಪೋಕ್ಪಿ ಜಿಲ್ಲೆಯ ಮ್ಯಾಂಗ್ಟೆ ರೀಲ್ ಕೋಮ್ (33) ಬಂಧಿತರು.
ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದು ಪರಿಶೀಲಿಸಿದಾಗ ಆರೋಪಿಗಳ ಮಾಹಿತಿ ಸಿಕ್ಕಿತ್ತು. ಆರೋಪಿ ಡಾಮೆಂಜಯ್ ನ.13ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಆಧಾರದಲ್ಲಿ ಮ್ಯಾಂಗ್ಟೆ ಎಂಬಾತನನ್ನು ನ.15 ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.
ತನಿಖೆಯ ವೇಳೆ ಆರೋಪಿತ ಮಾಂಗ್ಟೆ ಬೇರೆ ಬೇರೆ ರಾಜ್ಯಗಳಲ್ಲಿ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಮಾಡಿರುವುದು ಹಾಗೂ 250ಕ್ಕು ಹೆಚ್ಚು ಸಿಮ್ ಕಾರ್ಡ್ ಗಳನ್ನು ಹೊಂದಿದ್ದು ಅದನ್ನು ಸೈಬರ್ ವಂಚನೆಗೆ ಬಳಕೆ ಮಾಡಿರುವುದು ಕಂಡುಬಂದಿದೆ. ಸದ್ರಿ ಆರೋಪಿತನಿಂದ 08-ಮೊಬೈಲ್ ಫೋನ್, 20- ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು,18- ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು,ಬ11- ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7- ಸಿಮ್ ಕಾರ್ಡ್ ಗಳನ್ನು ಸ್ವಾಧೀನಪಡಿಸಲಾಗಿದೆ. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದಾರೆ.
Mangaluru CEN Police have arrested two individuals from Tripura and Manipur for duping a man of ₹7.27 lakh by claiming he needed to pay customs charges for a fake parcel. Investigation revealed the accused were linked to over 300 illegal bank accounts and 250 SIM cards used for cyber fraud. Multiple mobile phones, debit cards, passbooks, and SIM cards were seized during the operation.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm