ಬ್ರೇಕಿಂಗ್ ನ್ಯೂಸ್
19-11-25 09:26 pm Mangalore Correspondent ಕ್ರೈಂ
ಪುತ್ತೂರು, ನ.19 : ಸುಳ್ಯದಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ ಎಂಬ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಪ್ರಾರಂಭಿಸಿ, ಸಾರ್ವಜನಿಕರಿಂದ ಕಂತುಗಳ ಮೂಲಕ ಹಣ ಸಂಗ್ರಹಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಮೂರು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೆನಿಫಿಟ್ ಸ್ಕೀಂ ಹೆಸರಿನಲ್ಲಿ ಪ್ರತಿ ತಿಂಗಳು ಏಜಂಟರ ಮೂಲಕ ಹಣ ಸಂಗ್ರಹಿಸುತ್ತಿದ್ದರು. ಸುಳ್ಯ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ ಒಟ್ಟು 4115 ಸದಸ್ಯರಿಂದ ಹಣ ಸಂಗ್ರಹಿಸಿ ಹಣವನ್ನಾಗಲೀ, ಯಾವುದೇ ವಸ್ತುವನ್ನಾಗಾಲಿ ನೀಡದೇ ರೂ ₹3,08,62,500/- ವಂಚನೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಆರೋಪಿಗಳಾದ ಶಿವಪ್ರಕಾಶ್, ಕೆ.ಪಿ. ಗಣೇಶ್, ಕೆ.ಪಿ. ಕೃಷ್ಣಪ್ಪ ಗೌಡ, ಗೀತಾ ಕೆ.ಎಸ್., ಭಾರತಿ, ಗೀತಾ ಗಣೇಶ್, ಎನ್.ಇ. ವೈ. ಕಮಲಾಕ್ಷ, ಕೆ. ನಾಗೇಶ ಎಂಬವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಸುಳ್ಯ ಪೊಲೀಸ್ ಠಾಣಾಧಿಕಾರಿ ಬ್ರಿಜೇಶ್ ಮ್ಯಾಥ್ಯೂರವರು ಪ್ರಕರಣದ ಭಾಗಶಃ ತನಿಖೆಯನ್ನು ನಡೆಸಿದ್ದು, ಚಂದ್ರಶೇಖರ್ ಹೆಚ್.ವಿ ಅವರು ತನಿಖೆಯನ್ನು ಪೂರ್ಣಗೊಳಿಸಿ ಸುಳ್ಯದ ಎಸ್.ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸದ್ರಿ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಬಿ. ಮೋಹನ್ ಬಾಬು ಅವರ ಸಮಕ್ಷಮ ನಡೆದು 2025ರ ಅ.30ರಂದು ಪೂರ್ಣಗೊಳಿಸಿದ್ದು ಆರೋಪಿಗಳ ಪೈಕಿ ಕೆ.ಪಿ.ಗಣೇಶ್, ಗೀತಾ ಕೆ.ಎಸ್., ಭಾರತಿ ಅವರ ಅಪರಾಧ ಸಾಬೀತಾಗಿ ಅವರುಗಳನ್ನು ದೋಷಿ ಎಂದು ತೀರ್ಮಾನಿಸಿ ಉಳಿದ ಆರೋಪಿಗಳನ್ನು ಸಾಕ್ಷ್ಯ ಕೊರತೆಯಿಂದ ಖುಲಾಸೆಗೊಳಿಸಿ ಬಿಡುಗಡೆ ಮಾಡಿದ್ದರು. ಈ ನಡುವೆ, 1ನೇ ಆರೋಪಿ ಶಿವಪ್ರಕಾಶ್ ಮರಣ ಹೊಂದಿರುವುದರಿಂದ ಅವರ ಮೇಲಿನ ಪ್ರಕರಣ ಸ್ಥಗಿತಗೊಳಿಸಲಾಗಿದೆ.
ಇದೇ ನ.03ರಂದು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಘೋಷಣೆ ಮಾಡಿದ್ದು ಆರೋಪಿಗಳಾದ ಕೆಪಿ ಗಣೇಶ್, ಗೀತಾ ಕೆ.ಎಸ್, ಭಾರತಿ ಎಂಬವರಿಗೆ ಕಲಂ 406 ಸಹವಾಚಕ 149 ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ, ಕಲಂ 409 ಮತ್ತು 420 ರಡಿಯಲ್ಲಿ ಸಹವಾಚಕ 149 ರೊಂದಿಗೆ ಎರಡೂ ಕಲಂಗಳಿಗೆ ಆರೋಪಿಗಳಿಗೆ ಪ್ರತ್ಯೇಕವಾಗಿ 3 ವರ್ಷಗಳ ಕಾಲ ಸಾದಾ ಕಾರಾಗೃಹ ವಾಸ ಮತ್ತು ₹10,000/- ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಹೆಚ್ಚುವರಿ ಸಾದಾ ಕಾರಾಗೃಹ ವಾಸ ವಿಧಿಸಲಾಗಿದೆ. ಮೇಲಿನ ಎಲ್ಲಾ ಶಿಕ್ಷೆಗಳು ಏಕಕಾಲಕ್ಕೆ ಜಾರಿಗೊಳಿಸುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರಮೇಶ್ ವಾದ ಮಂಡಿಸಿರುತ್ತಾರೆ.
In a major verdict, the Sullia SCJ & JMFC Court has sentenced three accused—including two women—to three years of imprisonment in a multi-crore fraud case involving the “Sri Tatvamasi Charitable Trust” and “Sri Tatvamasi Enterprises.”
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 10:46 pm
Mangalore Correspondent
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
19-11-25 09:26 pm
Mangalore Correspondent
Mangalore Sukhananda Shetty murder, Arrest: ಸ...
19-11-25 07:55 pm
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am