ಬ್ರೇಕಿಂಗ್ ನ್ಯೂಸ್
20-11-25 06:01 pm Mangalore Correspondent ಕ್ರೈಂ
ಮಂಗಳೂರು, ನ.20 : ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕೀಮ್ ಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವರು ಸ್ಕೀಮ್ ಗಳ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಎಸ್ಕೇಪ್ ಆಗಿದ್ದಾರೆ. ಇವುಗಳ ಸಾಲಿಗೆ ಹೊಸತಾಗಿ ಬಿಎಂಆರ್ ಗ್ರೂಪ್ ಸೇರ್ಪಡೆಯಾಗಿದ್ದು ಹಣ ಹಿಂತಿರುಗಿಸದ ಹಿನ್ನೆಲೆಯಲ್ಲಿ ಗ್ರಾಹಕರು ಬಿಎಂಆರ್ ಗ್ರೂಪ್ ಕಚೇರಿಗೆ ಮುತ್ತಿಗೆ ಹಾಕಿ ದಾಂಧಲೆಗೈದ ಘಟನೆ ಕೃಷ್ಣಾಪುರದಲ್ಲಿ ನಡೆದಿದೆ.
ಬಿಎಂಆರ್ ಗ್ರೂಪಿನ ದಾವೂದ್ ಹಕೀಮ್ ಎಂಬಾತ ಈ ವಂಚನೆ ಎಸಗಿದ್ದು ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ 4-5 ವರ್ಷಗಳಿಂದ ಲಕ್ಕಿ ಸ್ಕೀಮ್ ನಡೆಸುತ್ತಿದ್ದಾನೆ. ಪ್ರತಿ ತಿಂಗಳು ದುಬಾರಿ ಕಾರು, ಫ್ಲಾಟ್ ಗಿಫ್ಟ್ ಸಿಗುವ ಆಮಿಷದಲ್ಲಿ ಸಾವಿರಾರು ಗ್ರಾಹಕರು ಹಣ ಕಟ್ಟಿದ್ದರು. 5 ವರ್ಷದಲ್ಲಿ ಎಂಟು ಸೀಸನ್ ಲಕ್ಕಿ ಸ್ಕೀಮ್ ಮಾಡಿದ್ದು ಸಾವಿರಾರು ಮಂದಿಗೆ ಕಟ್ಟಿದ ಹಣವೇ ಸಿಕ್ಕಿಲ್ಲ ಎಂಬ ಆರೋಪ ಇದೆ.




ಆದರೆ ಹಣವನ್ನು ಹಿಂತಿರುಗಿಸುತ್ತೇನೆ ಎಂದು ಹೇಳಿಯೇ ಗ್ರಾಹಕರನ್ನು ನಂಬಿಸಿಕೊಂಡು ಬಂದಿದ್ದ. ಆದರೆ ಇಲ್ಲಿಯವರೆಗೂ ಹಣ ಹಿಂತಿರುಗಿಸಿಲ್ಲ ಎಂದು ಗ್ರಾಹಕರು ಆಕ್ರೋಶಗೊಂಡು ಗುರುವಾರ ಬೆಳಗ್ಗೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ನೂರಾರು ಜನರು ಹಣ ಕಟ್ಟಿ ಕೈಸುಟ್ಟುಕೊಂಡಿದ್ದು ಕಚೇರಿ ಬಳಿಗೆ ಬಂದು ಗಲಾಟೆ ನಡೆಸಿದ್ದಾರೆ.
ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ವಂಚನೆಯ ಬಗ್ಗೆ ದೂರು ನೀಡುವಂತೆ ಹೇಳಿದ್ದು ಆರೋಪಿತ ದಾವೂದ್ ಹಕೀಮ್ ನನ್ನು ಠಾಣೆಗೆ ಕರೆದೊಯ್ದು ಕೂರಿಸಿದ್ದಾರೆ. ಆದರೆ ಸಂಜೆಯ ವರೆಗೂ ವಂಚನೆಗೊಳಗಾದವರು ಠಾಣೆಗೆ ಬಂದು ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ನಾಲ್ಕು ತಿಂಗಳ ಹಿಂದೆ ಎರಡು ಲಕ್ಕಿ ಸ್ಕೀಮ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆಬಳಿಕ ಬಡ್ಸ್ ಏಕ್ಟ್ ಮೂಲಕ ಅವರ ಸೊತ್ತುಗಳನ್ನು ಜಪ್ತಿ ಮಾಡಲು ಜಿಲ್ಲಾಡಳಿತಕ್ಕೆ ಬರೆದಿದ್ದಾರೆ. ಸೊತ್ತು ಜಪ್ತಿಗೆ ಮಂಗಳೂರು ವಿಭಾಗಾಧಿಕಾರಿಗೆ ಹೊಣೆ ನೀಡಲಾಗಿದ್ದರೂ ಅವರು ಮೀನ ಮೇಷ ಎಣಿಸುತ್ತಿದ್ದಾರೆ.
ಸುರತ್ಕಲ್ ವ್ಯಾಪ್ತಿಯಲ್ಲಿ ಇದೇ ರೀತಿಯ ಹತ್ತಕ್ಕೂ ಹೆಚ್ಚು ಲಕ್ಕಿ ಸ್ಕೀಮ್ ಗಳು ಕಾರ್ಯ ನಿರ್ವಹಿಸುತ್ತಿದ್ದು ರಾಜಾರೋಷವಾಗಿ ಜನರಿಗೆ ಟೋಪಿ ಹಾಕುತ್ತಿದೆ. ಪ್ರತಿ ತಿಂಗಳು ಐಷಾರಾಮಿ ಕಾರು, ಫ್ಲಾಟ್ ನೀಡುವ ಆಮಿಷದಲ್ಲಿ ಜನರನ್ನು ಮಂಗ ಮಾಡುತ್ತಿದ್ದಾರೆ. ಇಂಥವರಿಗೆ ಪ್ರಭಾವಿ ರಾಜಕಾರಣಿಗಳ ನಂಟು ಇರುವುದರಿಂದ ಪೊಲೀಸರು ಮಾತ್ರ ಮೌನ ವ್ರತದಲ್ಲಿದ್ದಾರೆ.
The menace of “lucky scheme” scams continues to grow in the Surathkal, Katipalla, and Krishnapura areas, with yet another major fraud coming to light. After several groups vanished with crores collected from local residents, BMR Group has now joined the list of scam operators.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm