ಬ್ರೇಕಿಂಗ್ ನ್ಯೂಸ್
20-11-25 10:53 pm Bangalore Correspondent ಕ್ರೈಂ
ಬೆಂಗಳೂರು, ನ.20 : ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವ್ಯಾನ್ ಅಡ್ಡಗಟ್ಟಿ ನಡೆಸಿದ ದರೋಡೆ ಪ್ರಕರಣ ಸಂಬಂಧಿಸಿ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಬುಧವಾರ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ನಡೆಸಲಾಗಿತ್ತು.
ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಇತರ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರಂತೆ, ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.




ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿ ಬಳಿ ಪತ್ತೆಯಾಗಿದ್ದು, ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿ ಬಳಿ ಇನೋವಾ ಕಾರನ್ನು ಬಿಟ್ಟು ಆರೋಪಿಗಳು ನಗದು ಹಣದ ಸಮೇತ ಪರಾರಿಯಾಗಿದ್ದಾರೆ.
ಆರೋಪಿಗಳಿಗಾಗಿ ತಿರುಪತಿ ಪೊಲೀಸರ ಜೊತೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸುತ್ತಿದ್ದಾರೆ.
In connection with the broad-daylight ATM cash van robbery in Bengaluru, police have detained two suspects in Tirupati. On Wednesday, a CMS agency cash-loading vehicle—heading to refill Bengaluru ATMs—was intercepted by men posing as RBI officials, and ₹7.11 crore was looted.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm