ಬ್ರೇಕಿಂಗ್ ನ್ಯೂಸ್
21-11-25 05:11 pm Udupi Correspondent ಕ್ರೈಂ
ಉಡುಪಿ, ನ.21 : ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದಲ್ಲಿ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಉತ್ತರ ಪ್ರದೇಶದವರು.
ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಿಸಲಾಗಿತ್ತು. ಕೇರಳದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕೊಚ್ಚಿನ್ ಶಿಪ್ಯಾರ್ಡ್, ಭಾರತೀಯ ನೌಕಾಪಡೆಗೆ ಟಗ್ ಮತ್ತು ಖಾಸಗಿ ಸಂಸ್ಥೆಗಳಿಗೆ ಹಡಗುಗಳನ್ನು ನಿರ್ಮಿಸುವಲ್ಲಿ ತೊಡಗಿಸಿರುವ ಸಂಸ್ಥೆಯಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಆರೋಪಿಗಳು ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ, ತಾಂತ್ರಿಕ ಮಾಹಿತಿಗಳನ್ನು ವಾಟ್ಸ್ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎಂಬ ವಿಚಾರ ಬಯಲಾಗಿದೆ. ಕೇರಳದಲ್ಲಿ ಕೆಲಸ ಮಾಡುವ ಸಮಯದಲ್ಲಿ ರೋಹಿತ್ ಹಲವು ಬಾರಿ ಮಾಹಿತಿ ಹಂಚಿಕೊಂಡಿದ್ದು, ಮಲ್ಪೆಗೆ ಬರುವವರೆಗೂ ಚಟುವಟಿಕೆ ಮುಂದುವರಿದಿತ್ತು ಎಂದು ತನಿಖೆಯಲ್ಲಿ ಪತ್ತೆಯಾಗಿದೆ.
ಈ ಕುರಿತು ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ನೀಡಿದ ದೂರಿನ ಆಧಾರದಲ್ಲಿ ಉಡುಪಿ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳ ವಿರುದ್ಧ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ, ಗೌಪ್ಯ ಮಾಹಿತಿ ಮಾರಾಟ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.
Udupi police have arrested two men from Uttar Pradesh on charges of leaking sensitive information related to the Indian Navy to Pakistan. The arrested individuals, identified as Rohit and Santri, were working at the Cochin Shipyard’s Malpe unit in Udupi.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm