ಬ್ರೇಕಿಂಗ್ ನ್ಯೂಸ್
21-11-25 11:07 pm Bangalore Correspondent ಕ್ರೈಂ
ಬೆಂಗಳೂರು, ನ.21 : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಹಾನ್ ದರೋಡೆ ಪ್ರಕರಣಕ್ಕೆ ರಾಜ್ಯದ ಪೊಲೀಸ್ ಪೇದೆಯೇ “ಮಾಸ್ಟರ್ಮೈಂಡ್” ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ದರೋಡೆ ತಂಡದ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಣ್ಣಪ್ಪ ನಾಯಕ್ ಭಾಗಿಯಾಗಿರುವ ಮಾಹಿತಿ ಇದೆ. ದರೋಡೆಯಲ್ಲಿ ಗೋವಿಂದಪುರ ಠಾಣೆಗೆ ಸೇರಿದ್ದ ಮತ್ತೊಬ್ಬ ಕಾನ್ಸ್ಟೇಬಲ್ ಕೂಡ ಭಾಗಿಯಾಗಿದ್ದಾನೆಂದು ಹೇಳಲಾಗಿದೆ. ಒಟ್ಟು ದರೋಡೆ ಕೃತ್ಯಕ್ಕೆ ಇವರೇ ಆರೋಪಿಗಳಿಗೆ ಪ್ಲಾನ್ ನೀಡಿದ್ದರು. ಅಣ್ಣಪ್ಪ ನಾಯಕ್ ಯೋಜನೆಯ ಮಾಸ್ಟರ್ಮೈಂಡ್ ಆಗಿದ್ದು, ದರೋಡೆ ನಂತರ ಪೊಲೀಸರಿಂದ ಹೇಗೆ ಪಾರಾಗಬೇಕು ಎಂಬ ತಂತ್ರಗಳನ್ನು ಹೇಳಿಕೊಟ್ಟಿದ್ದಾನೆ.



ದರೋಡೆಯಲ್ಲಿ CMS ಕಂಪನಿ ಮಾಜಿ ಉದ್ಯೋಗಿ ಝೇವಿಯರ್ ಕೂಡ ಸೇರಿದ್ದಾನೆ. ಅಣ್ಣಪ್ಪ ಮತ್ತು ಈತ ಸ್ನೇಹಿತರಾಗಿದ್ದು ಒಂದು ವರ್ಷದಿಂದ ಪ್ಲಾನ್ ನಡೆಸಿದ್ದರು. ತನಿಖೆಯ ವೇಳೆ ಪೇದೆ ಅಣ್ಣಪ್ಪ ನಾಯಕ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.
ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ರಾಬರಿ ಕೃತ್ಯ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ, ಎಂಜಿ ರೋಡ್ ಬಳಿ ಕ್ರಿಕೆಟ್ ಬುಕ್ಕಿಗಳಿಗೆ ಬೆದರಿಕೆ, ಜೈಲಿನಲ್ಲಿ ಪರಿಚಯವಾದ ಹುಡುಗರನ್ನು ಬಳಸಿಕೊಂಡು ಅನೇಕ ಕೃತ್ಯಗಳನ್ನು ನಡೆಸಿದ್ದಾನೆ, ದೊಡ್ಡ ದರೋಡೆ ಮಾಡಿ ಸೆಟ್ಲ್ ಆಗುವ ಯೋಜನೆ ಹಾಕಿದ್ದ. ಝೇವಿಯರ್ ಮತ್ತು ಅಣ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
A shocking revelation has emerged in Karnataka, where a police constable himself is suspected to be the mastermind behind a major multi-crore robbery. Bengaluru police have arrested Govindapura Police Constable Annappa Nayak, who is believed to have planned the heist executed in the Kumbalagodu police station limits.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm