ಬ್ರೇಕಿಂಗ್ ನ್ಯೂಸ್
21-11-25 11:07 pm Bangalore Correspondent ಕ್ರೈಂ
ಬೆಂಗಳೂರು, ನ.21 : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಹಾನ್ ದರೋಡೆ ಪ್ರಕರಣಕ್ಕೆ ರಾಜ್ಯದ ಪೊಲೀಸ್ ಪೇದೆಯೇ “ಮಾಸ್ಟರ್ಮೈಂಡ್” ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ದರೋಡೆ ತಂಡದ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಣ್ಣಪ್ಪ ನಾಯಕ್ ಭಾಗಿಯಾಗಿರುವ ಮಾಹಿತಿ ಇದೆ. ದರೋಡೆಯಲ್ಲಿ ಗೋವಿಂದಪುರ ಠಾಣೆಗೆ ಸೇರಿದ್ದ ಮತ್ತೊಬ್ಬ ಕಾನ್ಸ್ಟೇಬಲ್ ಕೂಡ ಭಾಗಿಯಾಗಿದ್ದಾನೆಂದು ಹೇಳಲಾಗಿದೆ. ಒಟ್ಟು ದರೋಡೆ ಕೃತ್ಯಕ್ಕೆ ಇವರೇ ಆರೋಪಿಗಳಿಗೆ ಪ್ಲಾನ್ ನೀಡಿದ್ದರು. ಅಣ್ಣಪ್ಪ ನಾಯಕ್ ಯೋಜನೆಯ ಮಾಸ್ಟರ್ಮೈಂಡ್ ಆಗಿದ್ದು, ದರೋಡೆ ನಂತರ ಪೊಲೀಸರಿಂದ ಹೇಗೆ ಪಾರಾಗಬೇಕು ಎಂಬ ತಂತ್ರಗಳನ್ನು ಹೇಳಿಕೊಟ್ಟಿದ್ದಾನೆ.



ದರೋಡೆಯಲ್ಲಿ CMS ಕಂಪನಿ ಮಾಜಿ ಉದ್ಯೋಗಿ ಝೇವಿಯರ್ ಕೂಡ ಸೇರಿದ್ದಾನೆ. ಅಣ್ಣಪ್ಪ ಮತ್ತು ಈತ ಸ್ನೇಹಿತರಾಗಿದ್ದು ಒಂದು ವರ್ಷದಿಂದ ಪ್ಲಾನ್ ನಡೆಸಿದ್ದರು. ತನಿಖೆಯ ವೇಳೆ ಪೇದೆ ಅಣ್ಣಪ್ಪ ನಾಯಕ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.
ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ರಾಬರಿ ಕೃತ್ಯ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ, ಎಂಜಿ ರೋಡ್ ಬಳಿ ಕ್ರಿಕೆಟ್ ಬುಕ್ಕಿಗಳಿಗೆ ಬೆದರಿಕೆ, ಜೈಲಿನಲ್ಲಿ ಪರಿಚಯವಾದ ಹುಡುಗರನ್ನು ಬಳಸಿಕೊಂಡು ಅನೇಕ ಕೃತ್ಯಗಳನ್ನು ನಡೆಸಿದ್ದಾನೆ, ದೊಡ್ಡ ದರೋಡೆ ಮಾಡಿ ಸೆಟ್ಲ್ ಆಗುವ ಯೋಜನೆ ಹಾಕಿದ್ದ. ಝೇವಿಯರ್ ಮತ್ತು ಅಣ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
A shocking revelation has emerged in Karnataka, where a police constable himself is suspected to be the mastermind behind a major multi-crore robbery. Bengaluru police have arrested Govindapura Police Constable Annappa Nayak, who is believed to have planned the heist executed in the Kumbalagodu police station limits.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm