ಬ್ರೇಕಿಂಗ್ ನ್ಯೂಸ್
21-11-25 11:07 pm Bangalore Correspondent ಕ್ರೈಂ
ಬೆಂಗಳೂರು, ನ.21 : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಹಾನ್ ದರೋಡೆ ಪ್ರಕರಣಕ್ಕೆ ರಾಜ್ಯದ ಪೊಲೀಸ್ ಪೇದೆಯೇ “ಮಾಸ್ಟರ್ಮೈಂಡ್” ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ದರೋಡೆ ತಂಡದ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಣ್ಣಪ್ಪ ನಾಯಕ್ ಭಾಗಿಯಾಗಿರುವ ಮಾಹಿತಿ ಇದೆ. ದರೋಡೆಯಲ್ಲಿ ಗೋವಿಂದಪುರ ಠಾಣೆಗೆ ಸೇರಿದ್ದ ಮತ್ತೊಬ್ಬ ಕಾನ್ಸ್ಟೇಬಲ್ ಕೂಡ ಭಾಗಿಯಾಗಿದ್ದಾನೆಂದು ಹೇಳಲಾಗಿದೆ. ಒಟ್ಟು ದರೋಡೆ ಕೃತ್ಯಕ್ಕೆ ಇವರೇ ಆರೋಪಿಗಳಿಗೆ ಪ್ಲಾನ್ ನೀಡಿದ್ದರು. ಅಣ್ಣಪ್ಪ ನಾಯಕ್ ಯೋಜನೆಯ ಮಾಸ್ಟರ್ಮೈಂಡ್ ಆಗಿದ್ದು, ದರೋಡೆ ನಂತರ ಪೊಲೀಸರಿಂದ ಹೇಗೆ ಪಾರಾಗಬೇಕು ಎಂಬ ತಂತ್ರಗಳನ್ನು ಹೇಳಿಕೊಟ್ಟಿದ್ದಾನೆ.



ದರೋಡೆಯಲ್ಲಿ CMS ಕಂಪನಿ ಮಾಜಿ ಉದ್ಯೋಗಿ ಝೇವಿಯರ್ ಕೂಡ ಸೇರಿದ್ದಾನೆ. ಅಣ್ಣಪ್ಪ ಮತ್ತು ಈತ ಸ್ನೇಹಿತರಾಗಿದ್ದು ಒಂದು ವರ್ಷದಿಂದ ಪ್ಲಾನ್ ನಡೆಸಿದ್ದರು. ತನಿಖೆಯ ವೇಳೆ ಪೇದೆ ಅಣ್ಣಪ್ಪ ನಾಯಕ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.
ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ರಾಬರಿ ಕೃತ್ಯ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ, ಎಂಜಿ ರೋಡ್ ಬಳಿ ಕ್ರಿಕೆಟ್ ಬುಕ್ಕಿಗಳಿಗೆ ಬೆದರಿಕೆ, ಜೈಲಿನಲ್ಲಿ ಪರಿಚಯವಾದ ಹುಡುಗರನ್ನು ಬಳಸಿಕೊಂಡು ಅನೇಕ ಕೃತ್ಯಗಳನ್ನು ನಡೆಸಿದ್ದಾನೆ, ದೊಡ್ಡ ದರೋಡೆ ಮಾಡಿ ಸೆಟ್ಲ್ ಆಗುವ ಯೋಜನೆ ಹಾಕಿದ್ದ. ಝೇವಿಯರ್ ಮತ್ತು ಅಣ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
A shocking revelation has emerged in Karnataka, where a police constable himself is suspected to be the mastermind behind a major multi-crore robbery. Bengaluru police have arrested Govindapura Police Constable Annappa Nayak, who is believed to have planned the heist executed in the Kumbalagodu police station limits.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm