ಬ್ರೇಕಿಂಗ್ ನ್ಯೂಸ್
24-11-25 08:37 pm Mangalore Correspondent ಕ್ರೈಂ
ಮಂಗಳೂರು, ನ.24 : ಒಂದೇ ಬೈಕಿನಲ್ಲಿ ನಾಲ್ವರು ಯುವಕರು ತಲ್ವಾರು ಹಿಡಿದು ತೆರಳುತ್ತಿದ್ದಾಗ ಇನ್ನೊಂದು ಬೈಕಿನಲ್ಲಿದ್ದ ಯುವಕನೊಬ್ಬ ನೋಡಿ ವಿಡಿಯೋ ಮಾಡಲೆತ್ನಿಸಿದ್ದು ಇದನ್ನು ಪ್ರಶ್ನಿಸಿ ನಾಲ್ವರಿದ್ದ ತಂಡ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಎಡಪದವು ಬಳಿ ನಡೆದಿದೆ.
ಎಡಪದವು ಬಳಿಯಲ್ಲಿ ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳೀಯರು ಬಳಿಕ ಅಡ್ಡಹಾಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರಿದ್ದ ಯುವಕರ ತಂಡವು ಮಿಜಾರು ನಿವಾಸಿ ಅಖಿಲೇಶ್ (27) ಎಂಬ ಯುವಕನಿಗೆ ಚೂರಿಯಿಂದ ಹಲ್ಲೆ ನಡೆಸಿದೆ. ಯುವಕನ ಕೈಗೆ ಚೂರಿಯಿಂದ ಇರಿತದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.





ನಾಲ್ವರು ಒಂದೇ ಬೈಕಿನಲ್ಲಿ ಚೂರಿ ಹಿಡಿದುಕೊಂಡು ತೆರಳುತ್ತಿದ್ದರು. ಈ ವೇಳೆ, ಅಖಿಲೇಶ್ ಇದನ್ನು ಗಮನಿಸಿ ವಿಡಿಯೋ ಮಾಡಲೆತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಬೇರೆಯವರಿಗೆ ಕರೆ ಮಾಡಿ ವಿಷಯ ಹೇಳುತ್ತಿದ್ದಾನೆಂದು ತಿಳಿದು ನಾಲ್ವರು ಅಡ್ಡಹಾಕಿ ಹಲ್ಲೆ ನಡೆಸಿದ್ದಾರೆ. ನಾಲ್ವರು ಯುವಕರು ಮಂಗಳೂರಿನ ಬೆಂಗ್ರೆ ಮತ್ತು ಸುರತ್ಕಲ್ ಪರಿಸರದವರು ಎನ್ನಲಾಗುತ್ತಿದ್ದು ಒಂದೇ ಕೋಮಿನವರಾಗಿದ್ದಾರೆ. ಇದಕ್ಕೂ ಮುನ್ನ ಇವರು ಬಾರ್ ಒಂದರಿಂದ ಹೊರಗೆ ಬರುವುದನ್ನು ಕೆಲವರು ನೋಡಿದ್ದಾರೆ. ಹೀಗಾಗಿ ಮದ್ಯದ ಅಮಲಿನಲ್ಲಿ ದಾಳಿ ಕೃತ್ಯ ಮಾಡಿರುವ ಬಗ್ಗೆಯೂ ಪೊಲೀಸರು ಶಂಕಿಸಿದ್ದಾರೆ.
ಆಬಳಿಕ ನಾಲ್ವರಿಗೆ ಎಡಪದವು ಬಳಿ ಮರು ದಾಳಿಗೆ ಯತ್ನ ನಡೆದಿದ್ದು ಈ ವೇಳೆ ಮೂವರು ಯುವಕರು ಬೈಕ್ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಒಬ್ಬಾತನನ್ನು ಸ್ಥಳೀಯರು ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಯಾವ ಉದ್ದೇಶದಿಂದ ಕೃತ್ಯ ನಡೆಸಿದ್ದಾರೆಂದು ತನಿಖೆ ನಡೆಸುತ್ತಿದ್ದಾರೆ.
A shocking incident occurred near Edapadavu where a group of four youths riding on a single bike, armed with a talwar (sword), attacked another youth with a knife after he attempted to record a video of them.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm