ಬ್ರೇಕಿಂಗ್ ನ್ಯೂಸ್
24-11-25 08:37 pm Mangalore Correspondent ಕ್ರೈಂ
ಮಂಗಳೂರು, ನ.24 : ಒಂದೇ ಬೈಕಿನಲ್ಲಿ ನಾಲ್ವರು ಯುವಕರು ತಲ್ವಾರು ಹಿಡಿದು ತೆರಳುತ್ತಿದ್ದಾಗ ಇನ್ನೊಂದು ಬೈಕಿನಲ್ಲಿದ್ದ ಯುವಕನೊಬ್ಬ ನೋಡಿ ವಿಡಿಯೋ ಮಾಡಲೆತ್ನಿಸಿದ್ದು ಇದನ್ನು ಪ್ರಶ್ನಿಸಿ ನಾಲ್ವರಿದ್ದ ತಂಡ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಎಡಪದವು ಬಳಿ ನಡೆದಿದೆ.
ಎಡಪದವು ಬಳಿಯಲ್ಲಿ ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳೀಯರು ಬಳಿಕ ಅಡ್ಡಹಾಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರಿದ್ದ ಯುವಕರ ತಂಡವು ಮಿಜಾರು ನಿವಾಸಿ ಅಖಿಲೇಶ್ (27) ಎಂಬ ಯುವಕನಿಗೆ ಚೂರಿಯಿಂದ ಹಲ್ಲೆ ನಡೆಸಿದೆ. ಯುವಕನ ಕೈಗೆ ಚೂರಿಯಿಂದ ಇರಿತದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.





ನಾಲ್ವರು ಒಂದೇ ಬೈಕಿನಲ್ಲಿ ಚೂರಿ ಹಿಡಿದುಕೊಂಡು ತೆರಳುತ್ತಿದ್ದರು. ಈ ವೇಳೆ, ಅಖಿಲೇಶ್ ಇದನ್ನು ಗಮನಿಸಿ ವಿಡಿಯೋ ಮಾಡಲೆತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಬೇರೆಯವರಿಗೆ ಕರೆ ಮಾಡಿ ವಿಷಯ ಹೇಳುತ್ತಿದ್ದಾನೆಂದು ತಿಳಿದು ನಾಲ್ವರು ಅಡ್ಡಹಾಕಿ ಹಲ್ಲೆ ನಡೆಸಿದ್ದಾರೆ. ನಾಲ್ವರು ಯುವಕರು ಮಂಗಳೂರಿನ ಬೆಂಗ್ರೆ ಮತ್ತು ಸುರತ್ಕಲ್ ಪರಿಸರದವರು ಎನ್ನಲಾಗುತ್ತಿದ್ದು ಒಂದೇ ಕೋಮಿನವರಾಗಿದ್ದಾರೆ. ಇದಕ್ಕೂ ಮುನ್ನ ಇವರು ಬಾರ್ ಒಂದರಿಂದ ಹೊರಗೆ ಬರುವುದನ್ನು ಕೆಲವರು ನೋಡಿದ್ದಾರೆ. ಹೀಗಾಗಿ ಮದ್ಯದ ಅಮಲಿನಲ್ಲಿ ದಾಳಿ ಕೃತ್ಯ ಮಾಡಿರುವ ಬಗ್ಗೆಯೂ ಪೊಲೀಸರು ಶಂಕಿಸಿದ್ದಾರೆ.
ಆಬಳಿಕ ನಾಲ್ವರಿಗೆ ಎಡಪದವು ಬಳಿ ಮರು ದಾಳಿಗೆ ಯತ್ನ ನಡೆದಿದ್ದು ಈ ವೇಳೆ ಮೂವರು ಯುವಕರು ಬೈಕ್ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಒಬ್ಬಾತನನ್ನು ಸ್ಥಳೀಯರು ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಯಾವ ಉದ್ದೇಶದಿಂದ ಕೃತ್ಯ ನಡೆಸಿದ್ದಾರೆಂದು ತನಿಖೆ ನಡೆಸುತ್ತಿದ್ದಾರೆ.
A shocking incident occurred near Edapadavu where a group of four youths riding on a single bike, armed with a talwar (sword), attacked another youth with a knife after he attempted to record a video of them.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am