ಬ್ರೇಕಿಂಗ್ ನ್ಯೂಸ್
24-11-25 08:37 pm Mangalore Correspondent ಕ್ರೈಂ
ಮಂಗಳೂರು, ನ.24 : ಒಂದೇ ಬೈಕಿನಲ್ಲಿ ನಾಲ್ವರು ಯುವಕರು ತಲ್ವಾರು ಹಿಡಿದು ತೆರಳುತ್ತಿದ್ದಾಗ ಇನ್ನೊಂದು ಬೈಕಿನಲ್ಲಿದ್ದ ಯುವಕನೊಬ್ಬ ನೋಡಿ ವಿಡಿಯೋ ಮಾಡಲೆತ್ನಿಸಿದ್ದು ಇದನ್ನು ಪ್ರಶ್ನಿಸಿ ನಾಲ್ವರಿದ್ದ ತಂಡ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಎಡಪದವು ಬಳಿ ನಡೆದಿದೆ.
ಎಡಪದವು ಬಳಿಯಲ್ಲಿ ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳೀಯರು ಬಳಿಕ ಅಡ್ಡಹಾಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರಿದ್ದ ಯುವಕರ ತಂಡವು ಮಿಜಾರು ನಿವಾಸಿ ಅಖಿಲೇಶ್ (27) ಎಂಬ ಯುವಕನಿಗೆ ಚೂರಿಯಿಂದ ಹಲ್ಲೆ ನಡೆಸಿದೆ. ಯುವಕನ ಕೈಗೆ ಚೂರಿಯಿಂದ ಇರಿತದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.





ನಾಲ್ವರು ಒಂದೇ ಬೈಕಿನಲ್ಲಿ ಚೂರಿ ಹಿಡಿದುಕೊಂಡು ತೆರಳುತ್ತಿದ್ದರು. ಈ ವೇಳೆ, ಅಖಿಲೇಶ್ ಇದನ್ನು ಗಮನಿಸಿ ವಿಡಿಯೋ ಮಾಡಲೆತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಬೇರೆಯವರಿಗೆ ಕರೆ ಮಾಡಿ ವಿಷಯ ಹೇಳುತ್ತಿದ್ದಾನೆಂದು ತಿಳಿದು ನಾಲ್ವರು ಅಡ್ಡಹಾಕಿ ಹಲ್ಲೆ ನಡೆಸಿದ್ದಾರೆ. ನಾಲ್ವರು ಯುವಕರು ಮಂಗಳೂರಿನ ಬೆಂಗ್ರೆ ಮತ್ತು ಸುರತ್ಕಲ್ ಪರಿಸರದವರು ಎನ್ನಲಾಗುತ್ತಿದ್ದು ಒಂದೇ ಕೋಮಿನವರಾಗಿದ್ದಾರೆ. ಇದಕ್ಕೂ ಮುನ್ನ ಇವರು ಬಾರ್ ಒಂದರಿಂದ ಹೊರಗೆ ಬರುವುದನ್ನು ಕೆಲವರು ನೋಡಿದ್ದಾರೆ. ಹೀಗಾಗಿ ಮದ್ಯದ ಅಮಲಿನಲ್ಲಿ ದಾಳಿ ಕೃತ್ಯ ಮಾಡಿರುವ ಬಗ್ಗೆಯೂ ಪೊಲೀಸರು ಶಂಕಿಸಿದ್ದಾರೆ.
ಆಬಳಿಕ ನಾಲ್ವರಿಗೆ ಎಡಪದವು ಬಳಿ ಮರು ದಾಳಿಗೆ ಯತ್ನ ನಡೆದಿದ್ದು ಈ ವೇಳೆ ಮೂವರು ಯುವಕರು ಬೈಕ್ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಒಬ್ಬಾತನನ್ನು ಸ್ಥಳೀಯರು ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಯಾವ ಉದ್ದೇಶದಿಂದ ಕೃತ್ಯ ನಡೆಸಿದ್ದಾರೆಂದು ತನಿಖೆ ನಡೆಸುತ್ತಿದ್ದಾರೆ.
A shocking incident occurred near Edapadavu where a group of four youths riding on a single bike, armed with a talwar (sword), attacked another youth with a knife after he attempted to record a video of them.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm