ಬ್ರೇಕಿಂಗ್ ನ್ಯೂಸ್
24-11-25 08:37 pm Mangalore Correspondent ಕ್ರೈಂ
ಮಂಗಳೂರು, ನ.24 : ಒಂದೇ ಬೈಕಿನಲ್ಲಿ ನಾಲ್ವರು ಯುವಕರು ತಲ್ವಾರು ಹಿಡಿದು ತೆರಳುತ್ತಿದ್ದಾಗ ಇನ್ನೊಂದು ಬೈಕಿನಲ್ಲಿದ್ದ ಯುವಕನೊಬ್ಬ ನೋಡಿ ವಿಡಿಯೋ ಮಾಡಲೆತ್ನಿಸಿದ್ದು ಇದನ್ನು ಪ್ರಶ್ನಿಸಿ ನಾಲ್ವರಿದ್ದ ತಂಡ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಎಡಪದವು ಬಳಿ ನಡೆದಿದೆ.
ಎಡಪದವು ಬಳಿಯಲ್ಲಿ ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳೀಯರು ಬಳಿಕ ಅಡ್ಡಹಾಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರಿದ್ದ ಯುವಕರ ತಂಡವು ಮಿಜಾರು ನಿವಾಸಿ ಅಖಿಲೇಶ್ (27) ಎಂಬ ಯುವಕನಿಗೆ ಚೂರಿಯಿಂದ ಹಲ್ಲೆ ನಡೆಸಿದೆ. ಯುವಕನ ಕೈಗೆ ಚೂರಿಯಿಂದ ಇರಿತದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.





ನಾಲ್ವರು ಒಂದೇ ಬೈಕಿನಲ್ಲಿ ಚೂರಿ ಹಿಡಿದುಕೊಂಡು ತೆರಳುತ್ತಿದ್ದರು. ಈ ವೇಳೆ, ಅಖಿಲೇಶ್ ಇದನ್ನು ಗಮನಿಸಿ ವಿಡಿಯೋ ಮಾಡಲೆತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಬೇರೆಯವರಿಗೆ ಕರೆ ಮಾಡಿ ವಿಷಯ ಹೇಳುತ್ತಿದ್ದಾನೆಂದು ತಿಳಿದು ನಾಲ್ವರು ಅಡ್ಡಹಾಕಿ ಹಲ್ಲೆ ನಡೆಸಿದ್ದಾರೆ. ನಾಲ್ವರು ಯುವಕರು ಮಂಗಳೂರಿನ ಬೆಂಗ್ರೆ ಮತ್ತು ಸುರತ್ಕಲ್ ಪರಿಸರದವರು ಎನ್ನಲಾಗುತ್ತಿದ್ದು ಒಂದೇ ಕೋಮಿನವರಾಗಿದ್ದಾರೆ. ಇದಕ್ಕೂ ಮುನ್ನ ಇವರು ಬಾರ್ ಒಂದರಿಂದ ಹೊರಗೆ ಬರುವುದನ್ನು ಕೆಲವರು ನೋಡಿದ್ದಾರೆ. ಹೀಗಾಗಿ ಮದ್ಯದ ಅಮಲಿನಲ್ಲಿ ದಾಳಿ ಕೃತ್ಯ ಮಾಡಿರುವ ಬಗ್ಗೆಯೂ ಪೊಲೀಸರು ಶಂಕಿಸಿದ್ದಾರೆ.
ಆಬಳಿಕ ನಾಲ್ವರಿಗೆ ಎಡಪದವು ಬಳಿ ಮರು ದಾಳಿಗೆ ಯತ್ನ ನಡೆದಿದ್ದು ಈ ವೇಳೆ ಮೂವರು ಯುವಕರು ಬೈಕ್ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಒಬ್ಬಾತನನ್ನು ಸ್ಥಳೀಯರು ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಯಾವ ಉದ್ದೇಶದಿಂದ ಕೃತ್ಯ ನಡೆಸಿದ್ದಾರೆಂದು ತನಿಖೆ ನಡೆಸುತ್ತಿದ್ದಾರೆ.
A shocking incident occurred near Edapadavu where a group of four youths riding on a single bike, armed with a talwar (sword), attacked another youth with a knife after he attempted to record a video of them.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm