ಬ್ರೇಕಿಂಗ್ ನ್ಯೂಸ್
24-11-25 08:37 pm Mangalore Correspondent ಕ್ರೈಂ
ಮಂಗಳೂರು, ನ.24 : ಒಂದೇ ಬೈಕಿನಲ್ಲಿ ನಾಲ್ವರು ಯುವಕರು ತಲ್ವಾರು ಹಿಡಿದು ತೆರಳುತ್ತಿದ್ದಾಗ ಇನ್ನೊಂದು ಬೈಕಿನಲ್ಲಿದ್ದ ಯುವಕನೊಬ್ಬ ನೋಡಿ ವಿಡಿಯೋ ಮಾಡಲೆತ್ನಿಸಿದ್ದು ಇದನ್ನು ಪ್ರಶ್ನಿಸಿ ನಾಲ್ವರಿದ್ದ ತಂಡ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಎಡಪದವು ಬಳಿ ನಡೆದಿದೆ.
ಎಡಪದವು ಬಳಿಯಲ್ಲಿ ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳೀಯರು ಬಳಿಕ ಅಡ್ಡಹಾಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರಿದ್ದ ಯುವಕರ ತಂಡವು ಮಿಜಾರು ನಿವಾಸಿ ಅಖಿಲೇಶ್ (27) ಎಂಬ ಯುವಕನಿಗೆ ಚೂರಿಯಿಂದ ಹಲ್ಲೆ ನಡೆಸಿದೆ. ಯುವಕನ ಕೈಗೆ ಚೂರಿಯಿಂದ ಇರಿತದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.





ನಾಲ್ವರು ಒಂದೇ ಬೈಕಿನಲ್ಲಿ ಚೂರಿ ಹಿಡಿದುಕೊಂಡು ತೆರಳುತ್ತಿದ್ದರು. ಈ ವೇಳೆ, ಅಖಿಲೇಶ್ ಇದನ್ನು ಗಮನಿಸಿ ವಿಡಿಯೋ ಮಾಡಲೆತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಬೇರೆಯವರಿಗೆ ಕರೆ ಮಾಡಿ ವಿಷಯ ಹೇಳುತ್ತಿದ್ದಾನೆಂದು ತಿಳಿದು ನಾಲ್ವರು ಅಡ್ಡಹಾಕಿ ಹಲ್ಲೆ ನಡೆಸಿದ್ದಾರೆ. ನಾಲ್ವರು ಯುವಕರು ಮಂಗಳೂರಿನ ಬೆಂಗ್ರೆ ಮತ್ತು ಸುರತ್ಕಲ್ ಪರಿಸರದವರು ಎನ್ನಲಾಗುತ್ತಿದ್ದು ಒಂದೇ ಕೋಮಿನವರಾಗಿದ್ದಾರೆ. ಇದಕ್ಕೂ ಮುನ್ನ ಇವರು ಬಾರ್ ಒಂದರಿಂದ ಹೊರಗೆ ಬರುವುದನ್ನು ಕೆಲವರು ನೋಡಿದ್ದಾರೆ. ಹೀಗಾಗಿ ಮದ್ಯದ ಅಮಲಿನಲ್ಲಿ ದಾಳಿ ಕೃತ್ಯ ಮಾಡಿರುವ ಬಗ್ಗೆಯೂ ಪೊಲೀಸರು ಶಂಕಿಸಿದ್ದಾರೆ.
ಆಬಳಿಕ ನಾಲ್ವರಿಗೆ ಎಡಪದವು ಬಳಿ ಮರು ದಾಳಿಗೆ ಯತ್ನ ನಡೆದಿದ್ದು ಈ ವೇಳೆ ಮೂವರು ಯುವಕರು ಬೈಕ್ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಒಬ್ಬಾತನನ್ನು ಸ್ಥಳೀಯರು ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಯಾವ ಉದ್ದೇಶದಿಂದ ಕೃತ್ಯ ನಡೆಸಿದ್ದಾರೆಂದು ತನಿಖೆ ನಡೆಸುತ್ತಿದ್ದಾರೆ.
A shocking incident occurred near Edapadavu where a group of four youths riding on a single bike, armed with a talwar (sword), attacked another youth with a knife after he attempted to record a video of them.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm