ಬ್ರೇಕಿಂಗ್ ನ್ಯೂಸ್
26-11-25 12:10 pm Mangalore Correspondent ಕ್ರೈಂ
ಮಂಗಳೂರು, ನ.26 : ಬಜ್ಪೆ ಠಾಣೆ ವ್ಯಾಪ್ತಿಯ ಎಡಪದವು ರಸ್ತೆಯಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಮಂಗಳೂರು ಬೆಂಗ್ರೆ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಎಂದು ಗುರುತಿಸಲಾಗಿದೆ.




ಇರುವೈಲು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂಬ ಯುವಕ ಮಂಗಳೂರಿನಲ್ಲಿ ಕೆಲಸ ಮುಗಿಸಿ ಮರಳುತ್ತಿದ್ದ ಸಂದರ್ಭ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ತಲವಾರು ಹಿಡಿದು ಹೋಗುತ್ತಿದ್ದುದನ್ನು ಗಮನಿಸಿ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಲು ಮುಂದಾಗಿದ್ದಾರೆ. ಇದನ್ನು ಕಂಡ ಆರೋಪಿಗಳು ರಸ್ತೆಯಲ್ಲಿ ಅಖಿಲೇಶ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ, ತನ್ನ ಗೆಳೆಯರಿಗೆ ವಿಷಯ ತಿಳಿಸಿದ್ದು ಸ್ಥಳೀಯರು ಎಡಪದವು ಬಳಿ ಅಡ್ಡಹಾಕಿದ್ದಾರೆ.
ಈ ವೇಳೆ, ಹಿಂಬದಿ ಇದ್ದ ಯುವಕ ಸಿನಾನ್ ಬೈಕಿನಿಂದ ಇಳಿದು ಓಡಲು ಯತ್ನಿಸಿದ್ದು ಎಡಪದವು ಕಡೆಯಿಂದ ಮೇಲಕ್ಕೆ ಇಳಿಜಾರು ರಸ್ತೆಯಲ್ಲಿ ಓಡಿದ್ದಾನೆ. ಅಲ್ಲದೆ, ಬಸ್ ಇನ್ನಿತರ ವಾಹನಗಳನ್ನು ನಿಲ್ಲಿಸಿ ಡ್ರಾಪ್ ಕೇಳಿದ್ದಾನೆ. ವಾಹನ ನಿಲ್ಲಿಸದೇ ಹೋದಾಗ ಸ್ಥಳೀಯರು ಸೇರಿ ಹಿಡಿದಿದ್ದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಖಿಲೇಶ್ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು ಬಂದರು ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಸ್ಥಳದಲ್ಲೇ ಪೊಲೀಸರಿಗೆ ಒಪ್ಪಿಸಿದ್ದರು. ಉಳಿದಂತೆ, ವೇಣೂರು ನಿವಾಸಿ ಇರ್ಷಾದ್ ನನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಜೊತೆಗೆ ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Bajpe police have arrested four men for attacking a youth with a sword on Edapadavu Road in Mangaluru. The incident occurred when the victim tried to record a video of the accused riding on a bike with weapons. Local residents helped capture one of the attackers, and police arrested all four — Sinan, Irshad, Suhail Akram, and Nisan — within hours.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm