ಬ್ರೇಕಿಂಗ್ ನ್ಯೂಸ್
26-11-25 02:39 pm Mangalore Correspondent ಕ್ರೈಂ
ಮಂಗಳೂರು, ನ.26 : ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಲಂಡನ್ ಮೂಲದ ಲೇಡಿ ಹೆಸರಲ್ಲಿ ಕರೆ ಮಾಡಿ ಪೌಂಡ್ಸ್ ನೀಡುವುದಾಗಿ ಹೇಳಿ ನಂಬಿಸಿ 13 ಲಕ್ಷ ರೂಪಾಯಿ ಪಡೆದು ವಂಚಿಸಿದ ಘಟನೆ ನಡೆದಿದ್ದು ಮೋಸ ಹೋದ ವ್ಯಕ್ತಿ ಕದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
57 ವರ್ಷದ ದೂರುದಾರರಿಗೆ ಫೇಸ್ ಬುಕ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ತನ್ನನ್ನು ಲಂಡನ್ ಮೂಲದ ಲಿಲ್ಲಿಯನ್ ಮೇರಿ ಜಾರ್ಜ್ ಎಂದು ಪರಿಚಯಿಸಿದ್ದ ಮಹಿಳೆಯು ಬಳಿಕ ಚಾಟಿಂಗ್ ಮಾಡಿದ್ದರು. ಈ ವೇಳೆ, ನವೆಂಬರ್ ತಿಂಗಳಲ್ಲಿ ಲಂಡನ್ ಪೌಂಡ್ಸ್ ತೆಗೆದುಕೊಂಡು ಭಾರತಕ್ಕೆ ಬರುವುದಾಗಿ ಆಕೆ ತಿಳಿಸಿದ್ದಳು. ಅದರಂತೆ ನ.15ರಂದು ಸೊನಾಲಿ ಗುಪ್ತ ಎನ್ನುವ ಮಹಿಳೆ ಕರೆ ಮಾಡಿ ಲಂಡನ್ ಮಹಿಳೆ ಲಿಲ್ಲಿಯನ್ ಮೇರಿ ಜಾರ್ಜ್ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಅವರು ಟ್ರಾವೆಲರ್ಸ್ ಚೆಕ್ 25,000 ಪೌಂಡ್ಸ್ ಮತ್ತು 1 ಕೆ.ಜಿ. ಚಿನ್ನವನ್ನು ತಂದಿದ್ದು ಭಾರತದ ರೂಪಾಯಿಯಲ್ಲಿ ಪೌಂಡ್ಸ್ ಗೆ ಸುಮಾರು 30 ಲಕ್ಷ ರೂ. ಆಗುತ್ತದೆ ಎಂದು ತಿಳಿಸಿ, ಕರೆಯನ್ನು ಲಿಲ್ಲಿಯನ್ ಗೆ ಕೊಟ್ಟಿದ್ದಾಳೆ.
ಬಳಿಕ ಲಿಲ್ಲಿಯನ್ ಮೇರಿ ಮಾತನಾಡಿ ಆ ಹಣವನ್ನು ಭೇಟಿ ಮಾಡುವ ಸಮಯದಲ್ಲಿ ನೀಡುವುದಾಗಿ ಹೇಳಿ ನಂಬಿಸಿದ್ದಾಳೆ. ಪೌಂಡ್ಸ್ ಕುರಿತು ಎಕ್ಸ್ಚೆಂಜ್ ರಿಜಿಸ್ಟ್ರೇಷನ್, ಡಿಸ್ಕೌಂಟ್ ಚಾರ್ಜಸ್, ಕಸ್ಟಮ್ಸ್ ಡಿಕ್ಲರೇಷನ್ ಫಾರ್ಮ್ ನಲ್ಲಿ ನಮೂದಿಸದೆ ಇರುವ ಬಗ್ಗೆ, ಮನಿ ಲಾಂಡರಿಂಗ್ ಚಾರ್ಜ್ ಬಗ್ಗೆ ಇನ್ನಿತರ ಅನೇಕ ಕಾರಣಗಳನ್ನು ತಿಳಿಸಿದ್ದು ತನ್ನನ್ನು ಪಾರು ಮಾಡಲು ಕೇಳಿಕೊಂಡಿದ್ದಳು. ಈ ವೇಳೆ, ಬೇರೆ ಬೇರೆ ಬ್ಯಾಂಕ್ ಖಾತೆಗಳ ವಿವರವನ್ನು ನೀಡಿ ಹಣ ಪಾವತಿಸಲು ಮಹಿಳೆ ತಿಳಿಸಿದ್ದಾಳೆ. ಅದರಂತೆ ನ.15ರಿಂದ 18ರ ವರೆಗೆ ದೂರುದಾರ ವ್ಯಕ್ತಿಯು ಹಂತ ಹಂತವಾಗಿ ಒಟ್ಟು 13,38,900 ರೂ. ವರ್ಗಾಯಿಸಿದ್ದಾರೆ. ಬಳಿಕ ಹಣವನ್ನು ವಾಪಸ್ ನೀಡುವಂತೆ ಕೇಳಿದಾಗ ಎರಡು ದಿನದಲ್ಲಿ ನೀಡುವುದಾಗಿ ಲಿಲ್ಲಿಯನ್ ತಿಳಿಸಿದ್ದಾಳೆ. ಆದರೆ ಆ ಬಳಿಕ ಆಕೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ತಾನು ಮೋಸ ಹೋಗಿರುವುದು ತಿಳಿದಿದ್ದು ಹಣ ಕಳಕೊಂಡ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ರಾಖಲಿಸಿದ್ದಾರೆ.
A 57-year-old man from Mangaluru lost ₹13.38 lakh after being duped by a woman who posed as a London resident and promised £25,000 and 1 kg of gold. Another woman pretended to be from Mumbai Airport Customs and demanded money for clearance charges. Realising he was cheated, the victim filed a complaint at Kadri Police Station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm