ಬ್ರೇಕಿಂಗ್ ನ್ಯೂಸ್
26-11-25 10:43 pm Mangalore Correspondent ಕ್ರೈಂ
ಮಂಗಳೂರು, ನ.26 : ಧರ್ಮಸ್ಥಳ ದೇವಸ್ಥಾನದಲ್ಲಿ ಮಹಿಳೆಯರ ಬ್ಯಾಗ್ ನಿಂದ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ತಾಯಿ- ಮಗಳಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
2025ರ ಮೇ 3ರಂದು ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಲತಾ ಎಂಬವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂ. ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳಾದ ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ @ಮಸಾಬಿ @ ಅಸ್ಮಾ (34) ಎಂಬವರನ್ನು ನ.23ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ದಸ್ತಗಿರಿ ಮಾಡಲಾಗಿದೆ.
ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮುಂದಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಆರೋಪಿಗಳ ಹುಬ್ಬಳಿ ಮನೆಯಿಂದ ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ್ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪ ವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ ನಿರೀಕ್ಷಕ ಬಿ.ಜಿ ಸುಬ್ಬಾಪುರ್ ಮಠ್ ರವರ ತಂಡದಲ್ಲಿ ಧರ್ಮಸ್ಥಳ ಪೊಲೀಸ್ ಉಪ ನಿರೀಕ್ಷಕ ಸಮರ್ಥ್ ಗಾಣಿಗೇರ, ಸಿಬ್ಬಂದಿ ರಾಜೇಶ್, ಪ್ರಶಾಂತ್, ಸಂದೀಪ್, ಮಲ್ಲಿಕಾರ್ಜುನ್, ಶಶಿಕುಮಾರ್, ಮಂಜುನಾಥ್ ಪಾಟೀಲ್, ಪ್ರಮೋದಿನಿ, ಸುನಿತಾ, ಸೌಭಾಗ್ಯ, ದೀಪಾ, ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
A mother–daughter theft gang from Hubballi, involved in stealing gold ornaments from women devotees at Dharmasthala temple, has been arrested. The duo—59-year-old B.B. Jaan and her daughter Aarthi alias Masabi alias Asma (34)—were caught on November 23 while attempting another theft near the temple gate.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm