ಬ್ರೇಕಿಂಗ್ ನ್ಯೂಸ್
26-11-25 10:43 pm Mangalore Correspondent ಕ್ರೈಂ
ಮಂಗಳೂರು, ನ.26 : ಧರ್ಮಸ್ಥಳ ದೇವಸ್ಥಾನದಲ್ಲಿ ಮಹಿಳೆಯರ ಬ್ಯಾಗ್ ನಿಂದ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ತಾಯಿ- ಮಗಳಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
2025ರ ಮೇ 3ರಂದು ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಲತಾ ಎಂಬವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂ. ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳಾದ ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ @ಮಸಾಬಿ @ ಅಸ್ಮಾ (34) ಎಂಬವರನ್ನು ನ.23ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ದಸ್ತಗಿರಿ ಮಾಡಲಾಗಿದೆ.
ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮುಂದಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಆರೋಪಿಗಳ ಹುಬ್ಬಳಿ ಮನೆಯಿಂದ ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ್ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪ ವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ ನಿರೀಕ್ಷಕ ಬಿ.ಜಿ ಸುಬ್ಬಾಪುರ್ ಮಠ್ ರವರ ತಂಡದಲ್ಲಿ ಧರ್ಮಸ್ಥಳ ಪೊಲೀಸ್ ಉಪ ನಿರೀಕ್ಷಕ ಸಮರ್ಥ್ ಗಾಣಿಗೇರ, ಸಿಬ್ಬಂದಿ ರಾಜೇಶ್, ಪ್ರಶಾಂತ್, ಸಂದೀಪ್, ಮಲ್ಲಿಕಾರ್ಜುನ್, ಶಶಿಕುಮಾರ್, ಮಂಜುನಾಥ್ ಪಾಟೀಲ್, ಪ್ರಮೋದಿನಿ, ಸುನಿತಾ, ಸೌಭಾಗ್ಯ, ದೀಪಾ, ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
A mother–daughter theft gang from Hubballi, involved in stealing gold ornaments from women devotees at Dharmasthala temple, has been arrested. The duo—59-year-old B.B. Jaan and her daughter Aarthi alias Masabi alias Asma (34)—were caught on November 23 while attempting another theft near the temple gate.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm