ಬ್ರೇಕಿಂಗ್ ನ್ಯೂಸ್
28-11-25 02:16 pm Bangalore Correspondent ಕ್ರೈಂ
ಬೆಂಗಳೂರು, ನ 28 : ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪತ್ನಿ ಪಲ್ಲವಿ ಅವರು ಮಾನಸಿಕವಾದಿ ಸದೃಢವಾಗಿದ್ದು, ಈ ಬಗ್ಗೆ ನಿಮ್ಹಾನ್ಸ್ ವೈದ್ಯರು ವರದಿ ನೀಡಿದ್ದಾರೆ.
1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಓಂ ಪ್ರಕಾಶ್ ಅವರನ್ನು ಕಳೆದ ವರ್ಷದ ಏಪ್ರಿಲ್ 20ರಂದು ಎಚ್ಎಸ್ಆರ್ ಲೇಔಟ್ನ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸಮಗ್ರ ತನಿಖೆಗಾಗಿ ಗೃಹ ಇಲಾಖೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಕೃತ್ಯ ಸಂಬಂಧ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಆಕೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಪೊಲೀಸರು ನಿಮ್ಹಾನ್ಸ್ಗೆ ದಾಖಲಿಸಿದ್ದರು.
ಪಲ್ಲವಿ ಸುಮಾರು 14 ದಿನಗಳ ಕಾಲ ವೈದ್ಯರು ಕೌನ್ಸೆಲಿಂಗ್, ಬುದ್ದಿಮಟ್ಟ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಪಡಿಸಿದ್ದರು. ಈ ವೇಳೆ ಪಲ್ಲವಿ ಮಾನಸಿಕವಾಗಿ ಸಡೃಢವಾಗಿರುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.
ಮತ್ತೊಂದೆಡೆ, ಪತಿಯ ಹತ್ಯೆ ಬಳಿಕ "I Have Killed Monster" ಎಂದು ಪಲ್ಲವಿ ವಾಯ್ಸ್ ನೋಟ್ ಕಳುಹಿಸಿದ್ದರು. ಈ ವಾಯ್ಸ್ ನೋಟ್ ಸಂಗ್ರಹಿಸಿ ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ವರದಿಯಲ್ಲಿ ವಾಯ್ಸ್ ನೋಟ್ನಲ್ಲಿ ಮಾತನಾಡಿರುವ ಧ್ವನಿ ಹಾಗೂ ಪಲ್ಲವಿ ಅವರ ಧ್ವನಿ ತಾಳೆಯಾಗಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಇದು ಪ್ರಮುಖ ಸಾಕ್ಷ್ಯಾಧಾರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಇದೇ ವರ್ಷದ ಆಗಸ್ಟ್ನಲ್ಲಿ ಸಿಸಿಬಿ ಪೊಲೀಸರು ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 1,150 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ವರದಿಯಲ್ಲಿ ಪಲ್ಲವಿಯನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು. ಆಸ್ತಿ ಹಾಗೂ ಕೌಟುಂಬಿಕ ಕಲಹಗಳಿಂದಾಗಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿರುವುದಾಗಿ ತನಿಖಾಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದರು.
ಕೃತ್ಯದಲ್ಲಿ ಓಂ ಪ್ರಕಾಶ್ ಮಗಳಾದ ತೃಪ್ತಿ ಪಾತ್ರ ಕಂಡುಬಂದಿಲ್ಲ. ಹೀಗಾಗಿ, ಆರೋಪಪಟ್ಟಿಯಲ್ಲಿ ಆಕೆಯ ಹೆಸರನ್ನು ಕೈ ಬಿಡಲಾಗಿತ್ತು.
ಊಟ ಮಾಡುವಾಗಲೇ ಹತ್ಯೆ:
ಐಪಿಎಸ್ ಅಧಿಕಾರಿಯಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವಾಗ ಖರೀದಿಸಿದ್ದ ಜಮೀನಿನ ಕೆಲಭಾಗವನ್ನು ಸಹೋದರಿ ಹೆಸರಿಗೆ ನೋಂದಣಿಗೆ ಮಾಡಲು ಮುಂದಾಗಿದ್ದರು. ಇದನ್ನು ವಿರೋಧಿಸಿದ್ದ ಪಲ್ಲವಿ, ಇದೇ ವಿಚಾರವಾಗಿ ಜಗಳ ಮಾಡುತ್ತಿದ್ದರು. ಏ.20ರಂದು ಹೊರಗಿನಿಂದ ಮೀನೂಟ ತರಿಸಿಕೊಂಡು ಊಟ ಮಾಡುವಾಗಲೇ ನಡೆದ ಜಗಳದಲ್ಲಿ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಗೊಳಗಾಗಿದ್ದರು. ಚಾಕು ಹಾಗೂ ಸ್ಕ್ರೂ ಡ್ರೈವರ್ನಿಂದ ಇರಿತಕ್ಕೆ ಒಳಗಾದ ಪ್ರಕಾಶ್ ರಕ್ತ ಮಡುವಿನಲ್ಲಿ ಬಿದ್ದಿದ್ದರು. ಖಾರದಪುಡಿ ಎರಚಿ ಅವರ ಮೇಲೆ ಅಡುಗೆ ಎಣ್ಣೆ ಸುರಿಯಲಾಗಿತ್ತು. ದೇಹದ 10 ಕಡೆಗಳಲ್ಲಿ ಗಾಯವಾಗಿತ್ತು. ಕೊಲೆ ಸಂಬಂಧ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಮೇರೆಗೆ ಪತ್ನಿಯನ್ನು ಏ.21ರಂದು ಪೊಲೀಸರು ಬಂಧಿಸಿದ್ದರು.
NIMHANS doctors have confirmed that Pallavi, wife of retired DGP Om Prakash and the prime accused in his brutal murder, is mentally stable, dismissing earlier claims of psychological illness. The report, along with a voice-note match where Pallavi said “I have killed the monster,” has become key evidence in the case.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm