ಬ್ರೇಕಿಂಗ್ ನ್ಯೂಸ್
02-12-25 02:26 pm Mangalore Correspondent ಕ್ರೈಂ
ಮಂಗಳೂರು, ಡಿ.2 : ಸ್ಕೂಟರ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಎಂದು ಗುರುತಿಸಲಾಗಿದೆ. ನವೆಂಬರ್ 14 ರಂದು ಮಂಗಳೂರಿಗೆ ಬಂದಿದ್ದ ಇವರು ಪಡೀಲ್ ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನವೆಂಬರ್ 30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳಾದ ಅಲೆಕ್ಸ್ ಡೊಮಿನಿಕ್ ಹಾಗೂ ಅಮಲ್ ಕೃಷ್ಣರನ್ನು ಬಂಧಿಸಿ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೊತ್ತ 1.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ನ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣ ಹಾಗೂ ಅಮಲ್ ಕೃಷ್ಣ ವಿರುದ್ದ ತಲಶೇರಿ ಹಾಗೂ ಕುರಚೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Kankanady City Police arrested two interstate thieves from Kerala—Alex Dominic and Amal Krishna—for stealing scooters parked in different locations around Mangaluru. The thieves had arrived by train and committed the thefts on November 14.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm