ಬ್ರೇಕಿಂಗ್ ನ್ಯೂಸ್
02-12-25 10:48 pm Bangalore Correspondent ಕ್ರೈಂ
ಬೆಂಗಳೂರು, ಡಿ.2 : ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೀಡುವುದಾಗಿ ನಂಬಿಸಿ, ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ಗುರೂಜಿ ಒಬ್ಬನನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಗುರೂಜಿ ಎಂಬಾತ ಬಂಧಿತನಾಗಿದ್ದು ಆತನಿಗೆ ಸಹಕಾರ ನೀಡುತ್ತಿದ್ದ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ನಂಬಿಸಿ, ಸಾಫ್ಟ್ವೇರ್ ಎಂಜಿನಿಯರ್ ತೇಜಸ್ ಎಂಬವರಿಂದ 48 ಲಕ್ಷ ರು. ಪಡೆದು ವಂಚಿಸಿದ್ದು ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ವಿಜಯ್ ಗುರೂಜಿ ಹಾಗೂ ಆತನಿಗೆ ಸೇರಿದ ವಿಜಯಲಕ್ಷ್ಮಿ ಆಯುರ್ವೇದಿಕ್ ಶಾಪ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದು ಗೊತ್ತಾದ ಮೇಲೆ ನಕಲಿ ಗುರೂಜಿ ನಾಪತ್ತೆಯಾಗಿದ್ದ. ಆರೋಪಿ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.
ಲೈಂಗಿಕ ಸಮಸ್ಯೆಗಾಗಿ ಕೆಂಗೇರಿಯ ಆಸ್ಪತ್ರೆಯಲ್ಲಿ ತೇಜಸ್ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆ ಪಕ್ಕದಲ್ಲಿ ಹಾಕಿದ್ದ ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಎಂಬ ಫಲಕ ನೋಡಿ, ಮೇ ತಿಂಗಳಲ್ಲಿ ಅಲ್ಲಿಗೆ ಭೇಟಿ ಕೊಟ್ಟಿದ್ದರು. ಅಲ್ಲಿಯೇ ಟೆಂಟ್ನಲ್ಲಿದ್ದ ವ್ಯಕ್ತಿಯೊಬ್ಬ ವಿಜಯ್ ಗುರೂಜಿಯನ್ನು ಪರಿಚಯ ಮಾಡಿಕೊಟ್ಟಿದ್ದ. ತೇಜಸ್ ಅವರನ್ನು ಪರೀಕ್ಷಿಸಿದ್ದ ವಿಜಯ್, ಯಶವಂತಪುರದ ವಿಜಯಲಕ್ಷ್ಮಿ ಆಯುರ್ವೇದ ಔಷಧ ಅಂಗಡಿಯಲ್ಲಿ 'ದೇವರಾಜ್ ಬೂಟಿ' ಹೆಸರಿನ ಔಷಧ ಖರೀದಿಸಿ ಸೇವಿಸಬೇಕು. ಅದರ ಬೆಲೆ ಗ್ರಾಂಗೆ 1.60 ಲಕ್ಷ ಇದ್ದು, ಆ ಔಷಧ ಬೇರೆ ಕಡೆ ಸಿಗುವುದಿಲ್ಲ. ಅದನ್ನು ಹರಿದ್ವಾರದಿಂದ ತರಿಸಲಾಗಿದೆ. ನಗದು ಪಾವತಿಸಿ ಆ ಔಷಧ ಖರೀದಿಸಬೇಕು. ಅದರ ಖರೀದಿಗೆ ಯಾರನ್ನೂ ಜತೆಯಲ್ಲಿ ಕರೆದುಕೊಂಡು ಹೋಗಬಾರದು. ಬೇರೆ ವ್ಯಕ್ತಿಯನ್ನು ಜತೆಯಲ್ಲಿ ಕರೆದೊಯ್ದರೆ ಆ ಔಷಧಿಗೆ ಶಕ್ತಿ ಫಲಿಸುವುದಿಲ್ಲ ಎಂಬುದಾಗಿ ಷರತ್ತು ಹಾಕಿದ್ದ.
ಗುರೂಜಿ ಸಲಹೆಯಂತೆ ತೇಜಸ್ ಹಲವು ಬಾರಿ 'ದೇವರಾಜ್ ಬೂಟಿ' ಮತ್ತು 'ಭವನ ಬೂಟಿ' ತೈಲ ಖರೀದಿಸಿದ್ದರು. ಬೇರೆ ಬೇರೆ ಔಷಧಗಳು ಹಾಗೂ ತೈಲಗಳ ಹೆಸರಿನಲ್ಲಿ ತೇಜಸ್ ಅವರಿಂದ ಹಂತ ಹಂತವಾಗಿ 48 ಲಕ್ಷ ರೂಪಾಯಿ ವಸೂಲು ಮಾಡಲಾಗಿದೆ. ಬ್ಯಾಂಕ್ ಹಾಗೂ ಸ್ನೇಹಿತರಿಂದ ಸಾಲ ಪಡೆದು ಔಷಧಗಳನ್ನು ಖರೀದಿಸಿದ್ದರು. ಆದರೂ ಸಮಸ್ಯೆ ಪರಿಹಾರವಾಗದೇ ಇದ್ದಾಗ ಆರೋಪಿ ಗುರೂಜಿ, ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ. ಚಿಕಿತ್ಸೆ ಮುಂದುವರಿಸದಿದ್ದರೆ ಹೆಚ್ಚಿನ ಸಮಸ್ಯೆಯಾಗಿ ಜೀವಕ್ಕೆ ತೊಂದರೆ ಆಗಬಹುದು ಎಂಬುದಾಗಿ ಹೆದರಿಸಿ ಮತ್ತೆ ಹಣ ಪೀಕಲು ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ
Bengaluru police have arrested a fraudster posing as an Ayurvedic guru who duped the public by promising cures for sexual health issues. The accused, Vijay Guruji, along with an associate from “Vijayalakshmi Ayurvedic Shop,” allegedly cheated software engineer Tejas of ₹48 lakh by selling so-called miracle medicines like “Devaraj Booti” and “Bhavan Booti,” claiming they were rare, powerful, and sourced from Haridwar.
02-12-25 10:17 pm
Bangalore Correspondent
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
Bangalore Suicide: ಎರಡು ವರ್ಷದ ಹಿಂದೆ ಗಂಡನ ಸಾವು...
01-12-25 08:18 pm
02-12-25 11:19 pm
HK News Desk
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ...
02-12-25 10:25 pm
ಭೂತಾನ್, ಮ್ಯಾನ್ಮಾರ್, ಶ್ರೀಲಂಕಾದಿಂದ ಕಳಪೆ ಅಡಿಕೆ...
01-12-25 10:18 pm
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
ಇಡುಕ್ಕಿ ಸ್ಕೈ ಡೈನ್ ವೈಫಲ್ಯ ; 120 ಅಡಿ ಎತ್ತರದಲ್ಲಿ...
30-11-25 10:59 pm
01-12-25 09:25 pm
Mangalore Correspondent
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
02-12-25 10:48 pm
Bangalore Correspondent
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm
ಗಿಫ್ಟ್ ಕೊಡಲಿಕ್ಕಿದೆಯೆಂದು ಸ್ವರ್ಣ ಜುವೆಲ್ಲರಿಯಿಂದ...
29-11-25 10:57 pm