ಬ್ರೇಕಿಂಗ್ ನ್ಯೂಸ್
04-12-25 10:53 pm Bangalore Correspondent ಕ್ರೈಂ
ಬೆಂಗಳೂರು, ಡಿ.4 : ಇತ್ತೀಚೆಗೆ ಮೆಗಾ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಬಂಧನವಾಗಿದ್ದು ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತೆ ಮಾಡಿತ್ತು. ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನಿಂದ ಸೈಬರ್ ಠಾಣೆ ಹೆಡ್ ಕಾನ್ಸ್ಟೇಬಲ್ ಒಬ್ಬರು ಹಣ ಕಳವುಗೈದ ಬಗ್ಗೆ ಪ್ರಕರಣ ದಾಖಲಾಗಿದೆ.
ಸೈಬರ್ ಠಾಣೆಯ ಪೊಲೀಸ್ ಸಿಬಂದಿ ಜೆ.ಬಿ. ಉಲ್ಲಾ ಎಂಬವರನ್ನು 11 ಲಕ್ಷ ಕಳವು ಪ್ರಕರಣದಲ್ಲಿ ಬಂಧಿಸಲಾಗಿದೆ. ಸೈಬರ್ ಪೊಲೀಸರು ಪ್ರಕರಣ ಒಂದರಲ್ಲಿ ಆರೋಪಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಕಾರು ಸಮೇತ ಕರೆತಂದಿದ್ದು ಬಳಿಕ ಬಂಧನ ಮಾಡಲಾಗಿತ್ತು.
ಆರೋಪಿ ಬಳಿಕ ಜಾಮೀನಿನಲ್ಲಿ ಹೊರಬಂದು ಠಾಣೆಯಲ್ಲಿದ್ದ ಕಾರನ್ನು ಕರೆದೊಯ್ಯಲು ಬಂದಿದ್ದ. ಈ ವೇಳೆ ತನ್ನ ಕಾರಿನಲ್ಲಿಟ್ಟಿದ್ದ 11 ಲಕ್ಷ ರೂಪಾಯಿ ಬ್ಯಾಗ್ ನಾಪತ್ತೆಯಾಗಿತ್ತು. ತಕ್ಷಣವೇ ಸೈಬರ್ ಠಾಣೆಯ ಸಿಬ್ಬಂದಿಯವರ ಗಮನಕ್ಕೆ ತಂದಾಗ ಅಧಿಕಾರಿಗಳು ಮೊದಲಿಗೆ ಗಾಬರಿಗೊಂಡರು ಬಳಿಕ ಸಿಸಿಟಿವಿ ಪರಿಶೀಲಿಸಿದಾಗ, ಹೆಡ್ ಕಾನ್ಸ್ಟೇಬಲ್ ಜೆ.ಬಿ. ಉಲ್ಲಾ ಕಾರಿನಲ್ಲಿದ್ದ 11 ಲಕ್ಷ ರೂಪಾಯಿ ಹಣದ ಬ್ಯಾಗ್ನ್ನು ತೆಗೆದುಕೊಂಡು ಹೋಗಿರುವುದು ಕಂಡುಬಂದಿದೆ.
ಆದರೆ ಹಣ ಕದ್ದ ನಂತರ ಜೆಬಿ ಉಲ್ಲಾ ತನಗೇನೂ ಗೊತ್ತಿಲ್ಲ ಎನ್ನುವಂತಿದ್ದು ಎಂದಿನಂತೆ ಕೆಲಸಕ್ಕೆ ಬರುತ್ತಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಅವರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಜೆಬಿ ಉಲ್ಲಾ ಅವರ ಮನೆಗೆ ಸರ್ಚ್ ಮಾಡಲು ತೆರಳಿದಾಗ, ಆತ ಮನೆ ಒಳಗೆ ಬಿಡದೆ ಗಲಾಟೆ ಮಾಡಿದ್ದ.
ಪೊಲೀಸರು ಸರ್ಚ್ ಮಾಡಿದಾಗ, ಮಲಗುವ ಕೋಣೆಯ ಬೆಡ್ ಕೆಳಗೆ ಲಕ್ಷಾಂತರ ರೂ. ಹಣವನ್ನು ಜೋಡಿಸಿ ಇಟ್ಟಿದ್ದು ಪತ್ತೆಯಾಯಿತು. ಕದ್ದ ಹಣದಿಂದಲೇ ತನ್ನ ಪತ್ನಿಗೆ ಆಭರಣಗಳನ್ನು ತೆಗೆದು ಕೊಟ್ಟಿರುವುದು ಕೂಡಾ ತನಿಖೆಯಲ್ಲಿ ಬಹಿರಂಗವಾಗಿದೆ. ಕದ್ದ ಹಣದಲ್ಲಿ ಸುಮಾರು ಎರಡು ಲಕ್ಷ ರೂಪಾಯಿ ಮಾತ್ರ ವಾಪಸ್ ನೀಡಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ನಗರದ ಪೊಲೀಸರನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇತ್ತೀಚೆಗೆ ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಬಂಧಿತನಾಗಿದ್ದ. ಜೆಪಿ ನಗರದಲ್ಲಿ ಪೊಲೀಸರೇ ಸೀನಿಯರ್ ಸಿಟಿಜನ್ ಬಳಿ ಹಣ ಪಡೆದ ಆರೋಪವೂ ಕೇಳಿಬಂದಿತ್ತು. ಇದೀಗ ಸೈಬರ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಜೆಬಿ ಉಲ್ಲಾ ಮೇಲೆ ಕಳ್ಳತನದ ದೂರು ದಾಖಲಾಗಿದೆ.
In a shocking incident that has embarrassed the Bengaluru police department, a head constable from the Cyber Crime Police Station has been arrested for stealing ₹11 lakh from a car parked right outside the Bengaluru Police Commissioner’s Office.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am