ಬ್ರೇಕಿಂಗ್ ನ್ಯೂಸ್
04-12-25 10:53 pm Bangalore Correspondent ಕ್ರೈಂ
ಬೆಂಗಳೂರು, ಡಿ.4 : ಇತ್ತೀಚೆಗೆ ಮೆಗಾ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಬಂಧನವಾಗಿದ್ದು ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತೆ ಮಾಡಿತ್ತು. ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನಿಂದ ಸೈಬರ್ ಠಾಣೆ ಹೆಡ್ ಕಾನ್ಸ್ಟೇಬಲ್ ಒಬ್ಬರು ಹಣ ಕಳವುಗೈದ ಬಗ್ಗೆ ಪ್ರಕರಣ ದಾಖಲಾಗಿದೆ.
ಸೈಬರ್ ಠಾಣೆಯ ಪೊಲೀಸ್ ಸಿಬಂದಿ ಜೆ.ಬಿ. ಉಲ್ಲಾ ಎಂಬವರನ್ನು 11 ಲಕ್ಷ ಕಳವು ಪ್ರಕರಣದಲ್ಲಿ ಬಂಧಿಸಲಾಗಿದೆ. ಸೈಬರ್ ಪೊಲೀಸರು ಪ್ರಕರಣ ಒಂದರಲ್ಲಿ ಆರೋಪಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಕಾರು ಸಮೇತ ಕರೆತಂದಿದ್ದು ಬಳಿಕ ಬಂಧನ ಮಾಡಲಾಗಿತ್ತು.
ಆರೋಪಿ ಬಳಿಕ ಜಾಮೀನಿನಲ್ಲಿ ಹೊರಬಂದು ಠಾಣೆಯಲ್ಲಿದ್ದ ಕಾರನ್ನು ಕರೆದೊಯ್ಯಲು ಬಂದಿದ್ದ. ಈ ವೇಳೆ ತನ್ನ ಕಾರಿನಲ್ಲಿಟ್ಟಿದ್ದ 11 ಲಕ್ಷ ರೂಪಾಯಿ ಬ್ಯಾಗ್ ನಾಪತ್ತೆಯಾಗಿತ್ತು. ತಕ್ಷಣವೇ ಸೈಬರ್ ಠಾಣೆಯ ಸಿಬ್ಬಂದಿಯವರ ಗಮನಕ್ಕೆ ತಂದಾಗ ಅಧಿಕಾರಿಗಳು ಮೊದಲಿಗೆ ಗಾಬರಿಗೊಂಡರು ಬಳಿಕ ಸಿಸಿಟಿವಿ ಪರಿಶೀಲಿಸಿದಾಗ, ಹೆಡ್ ಕಾನ್ಸ್ಟೇಬಲ್ ಜೆ.ಬಿ. ಉಲ್ಲಾ ಕಾರಿನಲ್ಲಿದ್ದ 11 ಲಕ್ಷ ರೂಪಾಯಿ ಹಣದ ಬ್ಯಾಗ್ನ್ನು ತೆಗೆದುಕೊಂಡು ಹೋಗಿರುವುದು ಕಂಡುಬಂದಿದೆ.
ಆದರೆ ಹಣ ಕದ್ದ ನಂತರ ಜೆಬಿ ಉಲ್ಲಾ ತನಗೇನೂ ಗೊತ್ತಿಲ್ಲ ಎನ್ನುವಂತಿದ್ದು ಎಂದಿನಂತೆ ಕೆಲಸಕ್ಕೆ ಬರುತ್ತಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಅವರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಜೆಬಿ ಉಲ್ಲಾ ಅವರ ಮನೆಗೆ ಸರ್ಚ್ ಮಾಡಲು ತೆರಳಿದಾಗ, ಆತ ಮನೆ ಒಳಗೆ ಬಿಡದೆ ಗಲಾಟೆ ಮಾಡಿದ್ದ.
ಪೊಲೀಸರು ಸರ್ಚ್ ಮಾಡಿದಾಗ, ಮಲಗುವ ಕೋಣೆಯ ಬೆಡ್ ಕೆಳಗೆ ಲಕ್ಷಾಂತರ ರೂ. ಹಣವನ್ನು ಜೋಡಿಸಿ ಇಟ್ಟಿದ್ದು ಪತ್ತೆಯಾಯಿತು. ಕದ್ದ ಹಣದಿಂದಲೇ ತನ್ನ ಪತ್ನಿಗೆ ಆಭರಣಗಳನ್ನು ತೆಗೆದು ಕೊಟ್ಟಿರುವುದು ಕೂಡಾ ತನಿಖೆಯಲ್ಲಿ ಬಹಿರಂಗವಾಗಿದೆ. ಕದ್ದ ಹಣದಲ್ಲಿ ಸುಮಾರು ಎರಡು ಲಕ್ಷ ರೂಪಾಯಿ ಮಾತ್ರ ವಾಪಸ್ ನೀಡಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ನಗರದ ಪೊಲೀಸರನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇತ್ತೀಚೆಗೆ ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಬಂಧಿತನಾಗಿದ್ದ. ಜೆಪಿ ನಗರದಲ್ಲಿ ಪೊಲೀಸರೇ ಸೀನಿಯರ್ ಸಿಟಿಜನ್ ಬಳಿ ಹಣ ಪಡೆದ ಆರೋಪವೂ ಕೇಳಿಬಂದಿತ್ತು. ಇದೀಗ ಸೈಬರ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಜೆಬಿ ಉಲ್ಲಾ ಮೇಲೆ ಕಳ್ಳತನದ ದೂರು ದಾಖಲಾಗಿದೆ.
In a shocking incident that has embarrassed the Bengaluru police department, a head constable from the Cyber Crime Police Station has been arrested for stealing ₹11 lakh from a car parked right outside the Bengaluru Police Commissioner’s Office.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am