ಬ್ರೇಕಿಂಗ್ ನ್ಯೂಸ್
09-12-25 04:33 pm Mangalore Correspondent ಕ್ರೈಂ
ಪುತ್ತೂರು, ಡಿ.9 : ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಚೀಲ ಕಾಫಿಯನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರು ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ಡಿ.3ರಂದು ಪಿರಿಯಾಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ಮನೆಗೆ ತೆರಳಿದ್ದರು. ಮರುದಿನ ಡಿ.04ರಂದು ಬೆಳಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.




ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡುಬಂದಿತ್ತು. ಈ ಬಗ್ಗೆ ತೃತೇಶ್ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿ ಆಶ್ಲೇಷ ಭಟ್ ಎಂಬಾತ ತನ್ನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ, ವಿಜಯ ಶೆಟ್ಟಿ ಮತ್ತು ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋವನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.
A major theft took place in Puttur where 80 bags of coffee worth ₹21.44 lakh were stolen from a lorry parked overnight. The Puttur Police have arrested five accused and recovered the stolen bags along with the vehicles used in the crime.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm