ಬ್ರೇಕಿಂಗ್ ನ್ಯೂಸ್
10-12-25 10:14 pm Udupi Correspondent ಕ್ರೈಂ
ಉಡುಪಿ, ಡಿ.10: ಕಳೆದ ವರ್ಷ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಸಜೆ ಮತ್ತು 10,000 ರೂ. ದಂಡ ವಿಧಿಸಿದೆ.
ಆರೋಪಿಗಳು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ದಾಖಲೆಗಳನ್ನು ಸೃಷ್ಟಿಸಿ, ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು. ಅವರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು ಅವರ ವಿರುದ್ದ ಕಲಂ 336(2), 336(3), 340(2), 319(2), 318(4) ಜೊತೆಗೆ 3(5) BNS ಮತ್ತು 14(A) ವಿದೇಶೀಗರ ಕಾಯ್ದೆ, ಕಲಂ:34, 42 ಆಧಾರ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಅಕ್ರಮವಾಗಿ ಉಡುಪಿಗೆ ಬಂದ ಆರೋಪಿಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ., ಇಸ್ಮಾಯಿಲ್ ಎಸ್.ಕೆ., ಕರೀಮ್ ಎಸ್.ಕೆ, ಸಲಾಂ ಎಸ್.ಕೆ, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್, ರಿಮೂಲ್, ಮೊಹಮ್ಮದ್ ಇಮಾಮ್ ಶೇಖ್ ಹಾಗೂ ಮೊಹಮ್ಮದ್ ಜಹಾಂಗಿರ್ ಆಲಂ ವಿರುದ್ದ ಪೊಲೀಸರು ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಡಿಸೆಂಬರ್ 8ರಂದು 10 ಮಂದಿ ಆರೋಪಿಗಳಿಗೆ ಎರಡು ವರ್ಷಗಳ ಕಾಲ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಿ ಆದೇಶಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
A local court has sentenced ten Bangladeshi nationals to two years imprisonment and imposed a fine of ₹10,000 each after they were arrested last year for illegally residing in Malpe.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm