ಬ್ರೇಕಿಂಗ್ ನ್ಯೂಸ್
14-12-25 08:35 pm Mangalore Correspondent ಕ್ರೈಂ
ಬಂಟ್ವಾಳ, ಡಿ.14: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವುದನ್ನ ಪತ್ತೆಹಚ್ಚಿದ ಪುಂಜಾಲಕಟ್ಟೆ ಪೊಲೀಸರು ಹಿಂದು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು ಪ್ರಕರಣ ಸಂಬಂಧಿಸಿ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಆತನ ಮನೆಯನ್ನು ಜಪ್ತಿ ಮಾಡಿದ್ದಾರೆ.
KA-70-8686ನೇ ನೊಂದಣಿಯ ಸದ್ರಿ ಗೂಡ್ಸ್ ಆಟೋವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿರುತ್ತದೆ. ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದು, ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ, ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಜಾನುವಾರು, ಆಟೋ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ. 85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿತ ಭೋಜ ಮೂಲ್ಯ ಅವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿರುತ್ತದೆ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ.
The Punjalkatte Police have detained a man in connection with an illegal cattle transportation case detected on the Maninalkuru–Tekkaru road in Bantwal taluk. The police have also seized the accused’s house and cattle shed under provisions of the cattle protection laws.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm