ಬ್ರೇಕಿಂಗ್ ನ್ಯೂಸ್
14-12-25 08:35 pm Mangalore Correspondent ಕ್ರೈಂ
ಬಂಟ್ವಾಳ, ಡಿ.14: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವುದನ್ನ ಪತ್ತೆಹಚ್ಚಿದ ಪುಂಜಾಲಕಟ್ಟೆ ಪೊಲೀಸರು ಹಿಂದು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು ಪ್ರಕರಣ ಸಂಬಂಧಿಸಿ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಆತನ ಮನೆಯನ್ನು ಜಪ್ತಿ ಮಾಡಿದ್ದಾರೆ.
KA-70-8686ನೇ ನೊಂದಣಿಯ ಸದ್ರಿ ಗೂಡ್ಸ್ ಆಟೋವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿರುತ್ತದೆ. ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದು, ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ, ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಜಾನುವಾರು, ಆಟೋ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ. 85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿತ ಭೋಜ ಮೂಲ್ಯ ಅವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿರುತ್ತದೆ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ.
The Punjalkatte Police have detained a man in connection with an illegal cattle transportation case detected on the Maninalkuru–Tekkaru road in Bantwal taluk. The police have also seized the accused’s house and cattle shed under provisions of the cattle protection laws.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm