ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
03-04-26 07:52 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm