ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm