ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm