ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm