ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
15-12-25 12:19 pm
Udupi Correspondent
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm